ದೇವರ ಮುಂದೆ ಕೆಲಸಕ್ಕೆ ಬೇಡಿಕೆ ಇಟ್ಟವರೇ ಈ ದಂಪತಿ ಟಾರ್ಗೇಟ್

Date:

ಬೆಂಗಳೂರು: ಸರ್ಕಾರಿ‌ ಕೆಲಸ ಕೊಡಿಸೋದಾಗಿ ಹಣ ಪಡೆದು ಯುವಕರಿಗೆ ವಂಚನೆ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಪ್ರಕಾಶ್ ಹಾಗೂ ಮಧು ಜೋಡಿ, ಕೆಲಸಕ್ಕಾಗಿ ಅಲೆಯುವ ಯುವಕರನ್ನು ಹುಡುಕಿ ಸರ್ಕಾರಿ ನೌಕರಿ ಕೊಡಿಸೋದಾಗಿ ಕಲರ್ ಕಲರ್ ಕಾಗೆ ಹಾರಿಸುತ್ತಿದ್ದರು.
ನಮಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯ ಇದೆ. ಅಲ್ಲದೆ ವಿವಿಧ‌ ಇಲಾಖೆಯ ಮುಖ್ಯಸ್ಥರು ಪರಿಚಯ ಇದ್ದಾರೆ. ಖಾಲಿ‌ ಇರುವ ಸರ್ಕಾರಿ‌ ಕೆಲಸ ಕೊಡಿಸೋದಾಗಿ‌ ಹೇಳಿ ಯುವಕರಿಂದ ಹಣ ವಸೂಲಿ ಮಾಡುತ್ತಿದ್ದರು. 6 ಲಕ್ಷ ಹಣ ಪಡೆದು ಕೆಲಸ ಕೊಡಿಸದೇ ಕಳ್ಳಾಟ ಆಡ್ತಿದ್ದರು. ಸದ್ಯ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಿದ್ಯಾರಣ್ಯಪುರ ಠಾಣೆಯಲ್ಲೇ ಆರೋಪಿಗಳ ವಿರುದ್ಧ 3 ಪ್ರಕರಣ ದಾಖಲಿರೋದು ಪತ್ತೆಯಾಗಿದೆ.
ನಗರದ ಹಲವು ಠಾಣೆಗಳಲ್ಲೂ ದಂಪತಿ ವಿರುದ್ಧ ಕೇಸ್ ದಾಖಲಾಗಿವೆ. ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, ಒಂದು‌ ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್ ಗೆ ಸೇರಿದಂತೆ 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ವಶಕ್ಕೆ ಪಡೆಯಲಾಗಿದೆ. 11 ವಿವಿಧ ಕಂಪನಿಯ ವಾಚ್ ಗಳು, ಚಿನ್ನದಂತೆ ಕಾಣುವ 2 ನಕಲಿ‌ ಬ್ರೇಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್ಗಳನ್ನು ಜಪ್ತಿ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...