ದೇವರ ಮುಂದೆ ಕೆಲಸಕ್ಕೆ ಬೇಡಿಕೆ ಇಟ್ಟವರೇ ಈ ದಂಪತಿ ಟಾರ್ಗೇಟ್

Date:

ಬೆಂಗಳೂರು: ಸರ್ಕಾರಿ‌ ಕೆಲಸ ಕೊಡಿಸೋದಾಗಿ ಹಣ ಪಡೆದು ಯುವಕರಿಗೆ ವಂಚನೆ ಮಾಡುತ್ತಿದ್ದ ಖತರ್ನಾಕ್ ದಂಪತಿಯನ್ನು ಅರೆಸ್ಟ್ ಮಾಡಲಾಗಿದೆ. ಪ್ರಕಾಶ್ ಹಾಗೂ ಮಧು ಪ್ರಕಾಶ್ ಬಂಧಿತ ಆರೋಪಿಗಳು. ಪ್ರಕಾಶ್ ಹಾಗೂ ಮಧು ಜೋಡಿ, ಕೆಲಸಕ್ಕಾಗಿ ಅಲೆಯುವ ಯುವಕರನ್ನು ಹುಡುಕಿ ಸರ್ಕಾರಿ ನೌಕರಿ ಕೊಡಿಸೋದಾಗಿ ಕಲರ್ ಕಲರ್ ಕಾಗೆ ಹಾರಿಸುತ್ತಿದ್ದರು.
ನಮಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯ ಇದೆ. ಅಲ್ಲದೆ ವಿವಿಧ‌ ಇಲಾಖೆಯ ಮುಖ್ಯಸ್ಥರು ಪರಿಚಯ ಇದ್ದಾರೆ. ಖಾಲಿ‌ ಇರುವ ಸರ್ಕಾರಿ‌ ಕೆಲಸ ಕೊಡಿಸೋದಾಗಿ‌ ಹೇಳಿ ಯುವಕರಿಂದ ಹಣ ವಸೂಲಿ ಮಾಡುತ್ತಿದ್ದರು. 6 ಲಕ್ಷ ಹಣ ಪಡೆದು ಕೆಲಸ ಕೊಡಿಸದೇ ಕಳ್ಳಾಟ ಆಡ್ತಿದ್ದರು. ಸದ್ಯ ವಿದ್ಯಾರಣ್ಯಪುರ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ವಿದ್ಯಾರಣ್ಯಪುರ ಠಾಣೆಯಲ್ಲೇ ಆರೋಪಿಗಳ ವಿರುದ್ಧ 3 ಪ್ರಕರಣ ದಾಖಲಿರೋದು ಪತ್ತೆಯಾಗಿದೆ.
ನಗರದ ಹಲವು ಠಾಣೆಗಳಲ್ಲೂ ದಂಪತಿ ವಿರುದ್ಧ ಕೇಸ್ ದಾಖಲಾಗಿವೆ. ಬಂಧಿತರಿಂದ 2 ಲಕ್ಷ ನಗದು ಹಣ, 4 ಫೋನ್, ಒಂದು‌ ದ್ವಿಚಕ್ರ ವಾಹನ, 6 ಬ್ಯಾಂಕ್ ಅಕೌಂಟ್ ಗೆ ಸೇರಿದಂತೆ 16 ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ವಶಕ್ಕೆ ಪಡೆಯಲಾಗಿದೆ. 11 ವಿವಿಧ ಕಂಪನಿಯ ವಾಚ್ ಗಳು, ಚಿನ್ನದಂತೆ ಕಾಣುವ 2 ನಕಲಿ‌ ಬ್ರೇಸ್ ಲೈಟ್, 1 ಚೈನ್, 2 ಉಂಗುರ, 2 ಪೆಂಡೆಂಟ್ಗಳನ್ನು ಜಪ್ತಿ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...