No menu items!
17.9 C
Munich
Saturday, August 1, 2026

ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ ಜೆಡಿಎಸ್ ಆಕ್ರೋಶ !

Must read

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಸಿದ್ದರಾಮಯ್ಯ ಅವರು ಕರ್ನಾಟಕದ ಸೊಕ್ಕಿನ ಮನುಷ್ಯ ಟೀಕಾಪ್ರಹಾರ ನಡೆಸಿದೆ. ಅಲ್ಲದೆ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನೆ ಮಾಡಿದೆ.
ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.

- Advertisement -spot_img

More articles

- Advertisement -spot_img

Latest article