ದೇಶದ ಮೌಲ್ಯಗಳನ್ನು ರಕ್ಷಿಸುವ ಸಲುವಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂಬುದಾಗಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾದ ಬಳಿಕ ಅಲ್ಲಿನ ಜನತೆಗೆ ಪತ್ರ ಬರೆದಿರುವ ಸೋನಿಯಾ, ಈ ಸಂದೇಶ ನೀಡಿದ್ದಾರೆ.
ಮುಂದಿನ ದಿನಗಳು ಬಹಳ ಕಷ್ಟದ್ದು ಎಂಬುದು ಗೊತ್ತಿದೆ. ಆದರೆ ಮುಂದೆ ಕಾಂಗ್ರೆಸ್ ಎಲ್ಲ ಸವಾಲುಗಳನ್ನು ಮೆಟ್ಟಿ ನಿಲ್ಲಲಿದೆ ಎಂಬ ಆತ್ಮವಿಶ್ವಾಸವನ್ನು ನಿಮ್ಮ ಬೆಂಬಲ ಹಾಗೂ ನಂಬಿಕೆ ನನಗೆ ನೀಡಿದೆ ಎಂದು ಅವರು ಕೃತಜ್ಞತೆ ಸಲ್ಲಿಸಿದ್ದಾರೆ