ದ್ವಾರಕೀಶ್ ಅಂತಿಮದರ್ಶನ ಪಡೆದು ಭಾವುಕರಾದ ಕಿಚ್ಚ ಸುದೀಪ್

Date:

ಬೆಂಗಳೂರು: ಹಿರಿಯ ನಟ ದ್ವಾರಕೀಶ್ ನಿನ್ನೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟ ಕಿಚ್ಚ ಶೂಟಿಂಗ್ ಬ್ರೇಕ್ ಹಾಕಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಗಾಗಿ ಚೆನ್ನೈನಲ್ಲಿದ್ದ ಸುದೀಪ್, ಇಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ದ್ವಾರಕೀಶ್ ಬ್ಯಾನರ್ ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು
ರವೀಂದ್ರ ಕಲಾಕ್ಷೇತ್ರದಲ್ಲಿ ಸದ್ಯ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ದ್ವಾರಕೀಶ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಟಿ.ಆರ್ ಮಿಲ್ ರುದ್ರಭೂಮಿಯಲ್ಲಿ ಮಾಡುವುದಾಗಿ ದ್ವಾರಕೀಶ್ ಅವರ ಪುತ್ರ ಯೋಗೀಶ್ ತಿಳಿಸಿದ್ದಾರೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನೆರವೇರಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...