ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ನೇತ್ರಾವತಿ ನದಿಗೆ ಎಸ್‌ಐಟಿ ಭೇಟಿ – ಸ್ಥಳ ಮಹಜರು ಆರಂಭ

Date:

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ನೇತ್ರಾವತಿ ನದಿಗೆ ಎಸ್‌ಐಟಿ ಭೇಟಿ – ಸ್ಥಳ ಮಹಜರು ಆರಂಭ
ಮಂಗಳೂರು: ಧರ್ಮಸ್ಥಳದಲ್ಲಿ ಕಳೆದ ಎರಡು ದಶಕಗಳಿಂದ ನಡೆದಿದೆ ಎನ್ನಲಾದ ಅಸಹಜ ಸಾವುಗಳು, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳು ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ನೇತ್ರಾವತಿ ನದಿಯ ತಟದಲ್ಲಿ ಸ್ಥಳ ಮಹಜರು ಕಾರ್ಯ ಆರಂಭಿಸಿದೆ.
ವಿಚಾರಣೆ ವೇಳೆ ದೂರುದಾರನೊಬ್ಬ, ನೇತ್ರಾವತಿ ನದಿಯ ಸ್ನಾನಘಟ್ಟದ ಬಳಿ ತಲೆ ಬುರುಡೆಯನ್ನು ಹೊರತೆಗೆದಿರುವ ಬಗ್ಗೆ ಮಾಹಿತಿ ನೀಡಿದ್ದನು. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ಫೊರೆನ್ಸಿಕ್, ಕಂದಾಯ, ಅರಣ್ಯ ಹಾಗೂ ಸರ್ವೇ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ಆರಂಭಿಸಿದೆ.
ಎಸ್ಐಟಿ ಎಸ್ಪಿ ಸಿ.ಎ.ಸೈಮನ್ ನೇತೃತ್ವದಲ್ಲಿ, ದೂರುದಾರನನ್ನು ಸ್ಥಳಕ್ಕೆ ಕರೆತರಲಾಗಿದ್ದು, ಬಿಗಿ ಪೊಲೀಸ್ ಭದ್ರತೆ ನಡುವೆ ಸ್ಥಳ ಮಹಜರು ನಡೆಯುತ್ತಿದೆ. ಹಿರಿಯ ಅಧಿಕಾರಿಗಳಾದ ಜಿತೇಂದ್ರ ಕುಮಾರ್ ದಯಾಮ್, ಅರಣ್ಯ ರೇಂಜರ್ ತ್ಯಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳೀಯ ಪರಿಶೀಲನೆಗೆ ಹಾಜರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ!

ಬೆಂಗಳೂರಿಗರಿಗಾಗಿ ನಿರ್ಮಿಸಿದ ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ! ಬೆಂಗಳೂರು:- ಬೆಂಗಳೂರಿಗರಿಗಾಗಿ ನಿರ್ಮಿಸಿದ...

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಬೆಂಗಳೂರು:...

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ?

ನಿಮ್ಮ ದಿನಚರಿಯಲ್ಲಿ ಸಾಸಿವೆಯನ್ನು ಬಳಸುವುದರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಸಾಸಿವೆ ಎಂದಾಕ್ಷಣ ಮನಸ್ಸಿನಲ್ಲಿ...

ನವರಾತ್ರಿಯ ಮೂರನೇ ದಿನ ದೇವಿ ಚಂದ್ರಘಂಟಾ !

ನವರಾತ್ರಿಯ ಮೂರನೇ ದಿನದಲ್ಲಿ ಪೂಜಿಸುವ ದೇವಿ ಚಂದ್ರಘಂಟಾ. ದೇವಿ ಚಂದ್ರಘಂಟಾ ಹೇಗಿದ್ದಾಳೆ...