ಧರ್ಮಸ್ಥಳ ಕೇಸ್: FSL ಫಲಿತಾಂಶ ಬರೋ ತನಕ ಶೋಧ ಕಾರ್ಯ ಸ್ಥಗಿತ: ಪರಮೇಶ್ವರ್

Date:

ಧರ್ಮಸ್ಥಳ ಕೇಸ್: FSL ಫಲಿತಾಂಶ ಬರೋ ತನಕ ಶೋಧ ಕಾರ್ಯ ಸ್ಥಗಿತ: ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದು ಅನಾಮಿಕ ವ್ಯಕ್ತಿಯೊಬ್ಬ ಹೇಳಿದ್ದರಿಂದಲೇ ಈ ಪ್ರಕರಣ ದೇಶವ್ಯಾಪಿ ಗಮನ ಸೆಳೆದಿದೆ. ಇದರಂತೆ ಸರ್ಕಾರ ಎಸ್ಐಟಿ ರಚಿಸಿ ತನಿಖೆ ನಡೆಸುತ್ತಿದೆ. ಇಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸದನದಲ್ಲಿ ಈ ಬಗ್ಗೆ ವಿವರ ನೀಡಿದ್ದಾರೆ. ಮಾಸ್ಕ್ ಮ್ಯಾನ್ ಹೇಳಿದಂತೆ ಎಸ್ಐಟಿ ತಂಡವು ಶೋಧ ಕಾರ್ಯ ಮುಂದುವರಿಸಿತು.
ಧರ್ಮಸ್ಥಳದ ಸುತ್ತಮುತ್ತ ಸುಮಾರು ಹತ್ತು ಸ್ಥಳಗಳಲ್ಲಿ ಅಗೆದಿದ್ದು, ಅವುಗಳಲ್ಲಿ ಕೇವಲ ಎರಡು ಜಾಗಗಳಲ್ಲಿ ಮಾತ್ರ ಅಸ್ಥಿಪಂಜರ ಹಾಗೂ ಮಾನವ ಮೂಳೆಗಳು ಪತ್ತೆಯಾಗಿವೆ. ಇನ್ನೂ ಅಧಿಕೃತ ತನಿಖೆ ಆರಂಭವಾಗಿಲ್ಲ. ಪತ್ತೆಯಾದ ಮೂಳೆಗಳ ಅನಾಲಿಸಿಸ್ ವರದಿ ಬಂದ ಬಳಿಕವೇ ಮುಂದಿನ ತನಿಖೆ ಆರಂಭವಾಗಲಿದೆ. ಅಪರಿಚಿತ ವ್ಯಕ್ತಿ ತೋರಿಸಿದ ಪ್ರತಿಯೊಂದು ಜಾಗವನ್ನೂ ಅಗೆಯುವುದಿಲ್ಲ, ಉತ್ಖನನ ಮುಂದುವರಿಸಬೇಕೇ ಅಥವಾ ಬೇಡವೇ ಎಂಬುದನ್ನು ಎಸ್ಐಟಿಯೇ ನಿರ್ಧರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...