ಧಾರವಾಡಕ್ಕೆ ಹಿಡಕಲ್‌ ನೀರಿಗಾಗಿ ಮತ್ತೆ ಕಾಮಗಾರಿ ಆರಂಭ!

Date:

ಧಾರವಾಡಕ್ಕೆ ಹಿಡಕಲ್‌ ನೀರಿಗಾಗಿ ಮತ್ತೆ ಕಾಮಗಾರಿ ಆರಂಭ!

ಬೆಳಗಾವಿ:-ಧಾರವಾಡಕ್ಕೆ ಹಿಡಕಲ್‌ ನೀರಿಗಾಗಿ ಮತ್ತೆ ಕಾಮಗಾರಿ ಆರಂಭವಾಗಿದೆ. ಜಿಲ್ಲೆಯ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರನ್ನು ಪೂರೈಸಲು ಕೈಗೊಂಡ ಯೋಜನೆಯ ಕಾಮಗಾರಿ ಮತ್ತೇ ಆರಂಭಗೊಂಡಿದ್ದು, ನಮ್ಮ ನೀರು ನಮ್ಮ ಹಕ್ಕು ಹೋರಾಟಗಾರ ಮತ್ತು ಮಾಜಿ ಉಸ್ತುವಾರಿ ಸಚಿವ ಶಶಿಕಾಂತ್ ನಾಯಿಕ ಜನಪ್ರತಿನಿಧಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ವಲಯಕ್ಕೆ ನೀರನ್ನು ಪೂರೈಸಲು ಕೈಗೊಂಡ ಯೋಜನೆಗೆ ಕಳೆದ 15 ದಿನಗಳ ಹಿಂದೆ ಜಲಾಶಯದ ಕೆಳಭಾಗದ ಪ್ರದೇಶದಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿತ್ತು. ರೈತರ ಗಮನಕ್ಕೆ ಬರುತ್ತಲೇ, ರೈತರು ಮತ್ತು ಹೋರಾಟಗಾರರು ಅದನ್ನು ಸ್ಥಗಿತಗೊಳಿಸಿ ಧರಣಿ ನಡೆಸಲಾಗಿತ್ತು. ಈ ವೇಳೆ ನೀರಾವರಿ ಇಲಾಖೆಯು ಮುಖಂಡರೊಂದಿಗೆ ಚರ್ಚಿಸಿ ಕಾಮಗಾರಿ ಪ್ರಾರಂಭಿಸುವುದಾಗಿ ಭರವಸೆಯನ್ನು ನೀಡಿದ್ದರು. ಆದರೇ, ಮತ್ತೇ ನಿನ್ನೆ ಕಾಮಗಾರಿ ಆರಂಭಗೊಂಡಿರುವುದು ಬೆಳಕಿಗೆ ಬಂದಿದೆ. ರೈತರು ಮತ್ತೇ ಇದರ ವಿರುದ್ದ ನಮ್ಮ ನೀರು ನಮ್ಮ ಹಕ್ಕು ಹೋರಾಟವನ್ನು ಆರಂಭಿಸಲಿದ್ದಾರೆ ಎಂದರು.

Share post:

Subscribe

spot_imgspot_img

Popular

More like this
Related

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ...

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ!

ಯೆಲ್ಲೋ ಮೆಟ್ರೋಗೆ ಹೊಸ ರೈಲು ಸೇರ್ಪಡೆ: ನಾಳೆಯಿಂದ 15 ನಿಮಿಷಕ್ಕೊಮ್ಮೆ ಸಂಚಾರ! ಬೆಂಗಳೂರು:...

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ

ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ...

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ

ಮೋಂಥಾ ಚಂಡಮಾರುತ: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಾದ್ಯಂತ ಭಾರೀ ಮಳೆ ಬೆಂಗಳೂರು:...