No menu items!
13.4 C
Munich
Monday, April 20, 2026

ಧೋನಿ ನಿವೃತ್ತಿ ಬಗ್ಗೆ ದೊಡ್ಡ ಘೋಷಣೆ ಮಾಡಿದ ಸಿ ಎಸ್ ಕೆ ತಂಡದ ಸಿಇಒ

Must read

 

2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಪಂದ್ಯ ಇಂದು ( ಏಪ್ರಿಲ್ 9 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ. ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕಮ್ ಬ್ಯಾಕ್ ಮಾಡುವ ತವಕದಲ್ಲಿದೆ. ಈ ಬಾರಿ ಹೇಗಾದರೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೇಲೆತ್ತಲೇಬೇಕು ಎಂದು ಪಣ ತೊಟ್ಟಿರುವ ಧೋನಿ ಕಠಿಣಾಭ್ಯಾಸದಲ್ಲಿ ತೊಡಗಿದ್ದಾರೆ.

 

ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಈ ಬಾರಿಯ ಐಪಿಎಲ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಟೂರ್ನಿ ಆಗಲಿದೆಯಾ ಎಂಬ ಚರ್ಚೆಗಳು ಆರಂಭವಾಗಿವೆ. 2020ರ ಆಗಸ್ಟ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಧೋನಿ ಪಾಲಿಗೆ ಈ ವರ್ಷದ ಐಪಿಎಲ್ ಕೊನೆಯ ಐಪಿಎಲ್ ಆಗಲಿದೆಯಾ ಎಂಬ ಪ್ರಶ್ನೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ಮುಕ್ತವಾಗಿ ಉತ್ತರ ನೀಡಿದ್ದಾರೆ.

ಈ ವರ್ಷದ ಐಪಿಎಲ್ ಮಹೇಂದ್ರ ಸಿಂಗ್ ಧೋನಿ ಪಾಲಿಗೆ ಕೊನೆಯ ಐಪಿಎಲ್ ಆಗಲಿದೆ ಎಂದು ನನಗೆ ಅನಿಸುತ್ತಿಲ್ಲ, ಇದು ನನ್ನ ವೈಯಕ್ತಿಕ ಅಭಿಪ್ರಾಯ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಬೇರೆ ನಾಯಕರ ಹುಡುಕಾಟದಲ್ಲಿಯೂ ನಾವು ಇಲ್ಲ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಶಿ ವಿಶ್ವನಾಥನ್ ತಿಳಿಸಿದರು. ಕಾಶಿ ವಿಶ್ವನಾಥನ್ ಅವರ ಈ ಹೇಳಿಕೆಯನ್ನು ಗಮನಿಸಿದರೆ ಮಹೇಂದ್ರ ಸಿಂಗ್ ಧೋನಿ ಅವರು ಮುಂದಿನ ಐಪಿಎಲ್ ಟೂರ್ನಿಯಲ್ಲಿಯೂ ಭಾಗವಹಿಸುವ ಸಾಧ್ಯತೆಗಳಿವೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article