ನಂಬರ್ 1 ಪಟ್ಟಕ್ಕಾಗಿ ವಿರಾಟ್​, ರೋಹಿತ್ ನಡುವೆ ಬಿಗ್ ಫೈಟ್​…ಯಾರಾಗ್ತಾರೆ ಸೆಂಚುರಿ ಕಿಂಗ್​?

Date:

ಭಾರತ ವಿಶ್ವಕಪ್ ಗೆಲ್ಲದೇ ಇರಬಹುದು. ಆದರೆ. ಎವರ್​ಗ್ರೀನ್ ಟೀಮ್. ಭಾರತ ತಂಡದ ಆಟಕ್ಕೆ ಇಡೀ ವಿಶ್ವ ಕ್ರಿಕೆಟೇ ತಲೆಬಾಗಿದೆ. ವಿರಾಟ್​ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ವಿಶ್ವಕಪ್​ ಗೆಲ್ಲುವ ನೆಚ್ಚಿನ ತಂಡ ಎನ್ನುವ ಹಣೆಪಟ್ಟಿಯೊಂದಿಗೆ ಇಂಗ್ಲೆಂಡ್​​ಗೆ ಹೋಗಿತ್ತು. ಅದಕ್ಕೆ ತಕ್ಕಂತೆ ಇಂಗ್ಲೆಂಡ್​​ನಲ್ಲಿ ಲೀಗ್​ ಹಂತದಲ್ಲಿ ಭರ್ಜರಿ ಪ್ರದರ್ಶನವನ್ನೇ ನೀಡಿತ್ತು. ಒಂದೇ ಒಂದು ಸೋಲು ಕಾಣದೆ ಸೆಮಿಫೈನಲ್​ ಪ್ರವೇಶಿಸಿತ್ತು. ಉಪ ನಾಯಕ ರೋಹಿತ್ ಶರ್ಮಾ ಅವರಂತೂ ಒಂದಲ್ಲ ಎರಡಲ್ಲ 5 ಶತಕಗಳನ್ನು ಸಿಡಿಸಿ ಈ ಬಾರಿ ನಮಗೇ ಕಪ್ ಕಣ್ರೋ ಎಂದು ಸಾರಿದ್ದರು. ಆದರೆ, ಸೆಮಿಫೈನಲ್​ನಲ್ಲಿ ಭಾರತ ಮುಗ್ಗರಿಸಿತು. ನ್ಯೂಜಿಲೆಂಡ್ ವಿರುದ್ಧ 18ರನ್​ಗಳಿಂದ ಭಾರತ ಸೋಲುವುದರೊಂದಿಗೆ ವಿಶ್ವಕಪ್ ಆಸೆ ಕಮರಿತು.
ವಿಶ್ವಕಪ್ ಬೆನ್ನಲ್ಲೇ ಭಾರತ ವೆಸ್ಟ್ ಇಂಡೀಸ್​ ಪ್ರವಾಸ ಕೈಗೊಂಡಿದೆ. ಈಗಾಗಲೇ ಟಿ20 ಮತ್ತು ಒಡಿಐ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿ ಟೆಸ್ಟ್​ಗೆ ಅಣಿಯಾಗಿದೆ. ವಿರಾಟ್ ಕೊಹ್ಲಿ ಒಡಿಐನಲ್ಲಿ ಸತತ 2 ಸೆಂಚುರಿ ಸಿಡಿಸಿದ್ದಾರೆ. ರೋಹಿತ್ ಶರ್ಮಾ ಟೆಸ್ಟ್​​ನಲ್ಲಿ ಫಾರ್ಮ್​ ಗೆ ಮರಳುವ ಸಾಧ್ಯತೆ ಹೆಚ್ಚಿದೆ.
ಸದ್ಯ ವಿಷಯ ಏನಂದರೆ ಪ್ರಸಕ್ತ ಸಾಲಿನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ..! ನಂಬರ್ 1 ಪಟ್ಟದಲ್ಲಿರುವುದು ಹಿಟ್ ಮ್ಯಾನ್, ಡಬಲ್ ಸೆಂಚುರಿ ಸ್ಟಾರ್ ರೋಹಿತ್ ಶರ್ಮಾ, 2019ರಲ್ಲಿ ರೋಹಿತ್ ಶರ್ಮಾ 6 ಒಡಿಐ ಸೆಂಚುರಿ ಸಿಡಿಸಿದ್ದಾರೆ. ಕೊಹ್ಲಿ 5 ಒಡಿಐ ಶತಕ ಸಿಡಿಸಿದ್ದಾರೆ.


ವಿರಾಟ್​ ಕೊಹ್ಲಿ ಅಡಿಲೇಡ್​, ನಾಗ್ಪುರ ಹಾಗೂ ರಾಂಚಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಕ್ರಮವಾಗಿ 104, 116, 123 ರನ್ ಮಾಡಿದ್ದರು. ಇತ್ತೀಚೆಗೆ ಮುಕ್ತಾಯವಾದ ವೆಸ್ಟ್ ಇಂಡೀಸ್​ ವಿರುದ್ಧದ 2 ಮತ್ತು ಕೊನೆಯ (3ನೇ) ಏಕದಿನ ಪಂದ್ಯದಲ್ಲಿ 120, 114ರನ್​ಗಳಿಂದ ಸತತ ಎರಡು ಶತಕ ಮಾಡಿದ್ದರು. ಇದರೊಂದಿಗೆ 5 ಶತಕ ಬಾರಿಸಿದ್ದಾರೆ.
ರೋಹಿತ್ ಶರ್ಮಾ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ 133, ಸೌಥಾಂಪ್ಟನ್​ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 122, ಮ್ಯಾಂಚೆಸ್ಟರ್​ನಲ್ಲಿ ಪಾಕಿಸ್ತಾನ ವಿರುದ್ಧ 140, ಬರ್ಮಿಂಗ್ ಹ್ಯಾಮ್​ನಲ್ಲಿ ಇಂಗ್ಲೆಂಡ್ ವಿರುದ್ಧ 102, ಬರ್ಮಿಂಗ್ ಹ್ಯಾಮ್​ನಲ್ಲಿ ಬಾಂಗ್ಲಾದೇಶದ ವಿರುದ್ಧ 104, ಲೀಡ್ಸ್​ನಲ್ಲಿ ಶ್ರೀಲಂಕಾ ವಿರುದ್ಧ 103ರನ್ ಬಾರಿಸಿದ್ದರು. ಒಟ್ಟು ಈ ಸಾಲಿನಲ್ಲಿ 6 ಶತಕ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ ಇನ್ನು ಒಂದೇ ಒಂದು ಒಡಿಐ ಶತಕಗಳಿಸಿದ್ರೆ ರೋಹಿತ್ ಜೊತೆ ಸಮಾನ ಸ್ಥಾನ ಹಂಚಿಕೊಳ್ಳುತ್ತಾರೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಅತೀ ಹೆಚ್ಚು ಒಡಿಐ ಶತಕಗಳಿಸಿದವರ ಪಟ್ಟಿಯಲ್ಲಿ ನಂಬರ್ 1 ಪಟ್ಟ ಅಲಂಕರಿಸಲು ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಪೈಪೋಟಿ ಇದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...