ಸಿಂಗಲ್ಲಾಗಿದ್ದೇನೆ , ಲಭ್ಯಳಿದ್ದೇನೆ ಎಂದ ನಟಿ!!

Date:

ಚೆನ್ನೈ: ತಮಿಳು ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ವನಿತಾ ವಿಜಯ್‍ಕುಮಾರ್ ಸದಾ ಗಾಸಿಪ್‍ನಲ್ಲಿರುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ಇವರ ವೈಯಕ್ತಿಕ ಜೀವನದ ಬಗ್ಗೆಯೇ ಹೆಚ್ಚು ಚರ್ಚೆಯಾಗುವುದು ತಿಳಿದೇ ಇದೆ. ಅದೇ ರೀತಿ ಇದೀಗ ಅವರ ನಾಲ್ಕನೇ ವಿವಾಹದ ವಿಚಾರ ಸದ್ದು ಮಾಡುತ್ತಿದ್ದು, ಈ ಕುರಿತು ಸ್ವತಃ ನಟಿ ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ನಟಿ ವನಿತಾ, ನಾನು ಸಿಂಗಲ್ ಹಾಗೂ ಲಭ್ಯವಿದ್ದೇನೆ. ಆದರೆ ವದಂತಿ ಹಬ್ಬಿಸಬೇಡಿ ಹಾಗೂ ನಂಬಬೇಡಿ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಲಾಕ್‍ಡೌನ್ ವೇಳೆ ವಿಎಫ್‍ಎಕ್ಸ್ ತಂತ್ರಜ್ಞ ಪೀಟರ್ ಪೌಲ್ ಜೊತೆ 3ನೇ ವಿವಾಹವಾಗಿದ್ದ ವನಿತಾ ಕೆಲವೇ ತಿಂಗಳ ಬಳಿಕ ಪತಿಯಿಂದ ದೂರ ಆಗಿದ್ದಾರೆ. ಇದಾದ ಬಳಿಕ ಮತ್ತೊಂದು ವಿವಾಹವಾಗಿದ್ದಾರೆ ಎಂಬ ವದಂತಿ ಕೇಳಿ ಬಂದಿತ್ತು.

ಇಬ್ಬರು ಹೆಣ್ಣು ಮಕ್ಕಳ ತಾಯಿಯಾಗಿರುವ ವನಿತಾ, ಕಳೆದ ವರ್ಷ ಲಾಕ್‍ಡೌನ್ ನಲ್ಲಿ ಪೀಟರ್ ಪೌಲ್ ಜೊತೆ ಸರಳವಾಗಿ ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. ಆದರೆ ಕೆಲವೇ ತಿಂಗಳಲ್ಲಿ ಪತಿ ಪೀಟರ್ ಅವರನ್ನು ಮನೆಯಿಂದ ಹೊರಹಾಕಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಬಳಿಕ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ವನಿತಾ ಪತಿ ಪೀಟರ್ ಮೋಸ ಮಾಡಿರುವುದಾಗಿ ಹೇಳಿ ಕಣ್ಣೀರಿಟ್ಟಿದ್ದರು. ಈ ಮೂಲಕ 3ನೇ ವಿವಾಹವನ್ನು ಸಹ ಕಡೆದುಕೊಂಡಿರುವ ಬಗ್ಗೆ ಸ್ಪಷ್ಟಪಡಿಸಿದ್ದರು.

ಪೀಟರ್‍ನನ್ನು ತುಂಬಾ ಪ್ರೀತಿಸುತ್ತಿದ್ದೆ, ತುಂಬಾ ಚೆನ್ನಾಗಿ ನೋಡಿಕೊಂಡಿದ್ದೆ. ಆದರೆ ಆತನಿಗೆ ಕುಡಿತದ ಚಟ ಇರುವುದು ತಿಳಿದಿರಲಿಲ್ಲ. ನನ್ನ ಮಕ್ಕಳಿಗೆ ತಂದೆಯನ್ನು ಬಯಸಿ, ವಿವಾಹವಾಗಿದ್ದೆ. ಆದರೆ ಪೀಟರ್ ಮೋಸ ಮಾಡಿದ ಎಂದು ಹೇಳಿದ್ದರು. ಇದಾದ ಬಳಿಕ ನಟಿ ವನಿತಾ ವಿಜಯ್‍ಕುಮಾರ್ ಅವರು 4ನೇ ವಿವಾಹವಾಗಿದ್ದಾರೆ ಎಂಬ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿತ್ತು. ಇದೀಗ ಇದಕ್ಕೆ ಪ್ರತಿಕ್ರಿಯೆ ನೀಡುವ ಮೂಲಕ ವನಿತಾ ಅವರು ಸ್ಪಷ್ಟನೆ ನೀಡಿ, ಸಿಂಗಲ್ ಆಗಿರುವುದಾಗಿ ತಿಳಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...