ನಟ ಅಲ್ಲು ಅರ್ಜುನ್ ಗೆ ಬಸ್ ಕಂಟಕ

Date:

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಟಿಎಸ್‌ಆರ್‌ಟಿಸಿ) ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಇತ್ತೀಚಿನ ಜಾಹೀರಾತಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರಿಗೆ ಲೀಗಲ್ ನೋಟಿಸ್ ನೀಡಿದೆ.

ಯೂಟ್ಯೂಬ್‌ನಲ್ಲಿ ಪ್ರಸಾರವಾಗುತ್ತಿರುವ ಬೈಕ್- ಟ್ಯಾಕ್ಸಿ ಅಪ್ಲಿಕೇಶನ್ ರ‍್ಯಾಪಿಡೋ ಜಾಹೀರಾತಿನಲ್ಲಿ, ಅಲ್ಲು ಅರ್ಜುನ್​ ದೋಸೆ ಮಾರುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ.

ಅದರಲ್ಲಿ ಓರ್ವ ವ್ಯಕ್ತಿಯೊಂದಿಗೆ ಮಾತನಾಡುತ್ತಾ ದೋಸೆ ತಿನ್ನಬೇಕು ಅಂದ್ರೆ ಎರಡೇ ಜಾಗ ಒಂದು ಈ ಗುರು ಹತ್ರ, ಇನ್ನೊಂದು ಯಾವಾಗ್ಲೂ ರಷ್​ ಆಗಿರೋ ಆ ಬಸ್​ನಲ್ಲಿ ಎಂದಿದ್ದಾರೆ. ಅಲ್ಲದೇ ಆ ಬಸ್​ ಹತ್ತುವವರನ್ನು ಕೈಮಾ ಮಾಡಿ ಮಸಾಲೆ ದೋಸೆ ಮಾಡಿ ಇಳಿಸುತ್ತಾರೆ. ಅದಕ್ಕೆ ಸುಮ್ಮನೇ ತೊಂದರೆ ಯಾಕೆ? ರ‍್ಯಾಪಿಡೋ ಬುಕ್​ ಮಾಡಿ, ದೋಸೆ ತಿರುಗಿಸೋ ಅಷ್ಟು ಸುಲಭವಾಗಿ ಅದರಲ್ಲಿ ಹೋಗಬಹುದು ಎಂದಿದ್ದಾರೆ.

ಅವಹೇಳನ ಮಾಡುವುದನ್ನು ಟಿಎಸ್‌ಆರ್‌ಟಿಸಿ ಆಡಳಿತ ಅಥವಾ ಪ್ರಯಾಣಿಕರು ಮತ್ತು ನಮ್ಮ ನೌಕರರು ಹಾಗೂ ನಿವೃತ್ತ ನೌಕರರು ಸಹಿಸುವುದಿಲ್ಲ ಎಂದು ಟಿಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಐಪಿಎಸ್ ವಿಸಿ ಸಜ್ಜನಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲು ಅರ್ಜುನ್ ಮತ್ತು ಜಾಹೀರಾತನ್ನು ಪ್ರಚಾರ ಮಾಡುವ ಸಂಸ್ಥೆಗೆ ಲೀಗಲ್ ನೋಟಿಸ್ ಕಳುಹಿಸಲಾಗಿದೆ. ವಾಸ್ತವವಾಗಿ, ಉತ್ತಮ ಮತ್ತು ಪರಿಸರದ ಹಿತದೃಷ್ಟಿಯಿಂದ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಜಾಹೀರಾತುಗಳಲ್ಲಿ ನಟರು ನಟಿಸಬೇಕು ಎಂದು ಐಪಿಎಸ್ ಅಧಿಕಾರಿ ಹೇಳಿದ್ದಾರೆ.

ವಿಸಿ ಸಜ್ಜನರ್ ಈ ಹಿಂದೆ ಸೈಬರಾಬಾದ್ ಪೊಲೀಸ್ ಕಮಿಷನರ್ ಆಗಿದ್ದರು. ನಂತರ ಅವರನ್ನು ವರ್ಗಾಯಿಸಲಾಯಿತು. ಆಗಸ್ಟ್‌ನಲ್ಲಿ ಟಿಎಸ್‌ಆರ್‌ಟಿಸಿ ಎಂಡಿ ಆಗಿ ನೇಮಿಸಲಾಯಿತು. ಸಾರ್ವಜನಿಕ ಸಾರಿಗೆಯ ವಿರುದ್ಧ ಮಾತನಾಡುವುದು ಮತ್ತು ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಅವರು ನಟರು ಹಾಗೂ ಸೆಲೆಬ್ರಿಟಿಗಳಿಗೆ ಒತ್ತಾಯಿಸಿದ್ದಾರೆ.

Share post:

Subscribe

spot_imgspot_img

Popular

More like this
Related

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ ವೇದಿಕೆ ಸಿದ್ಧ

India vs Pakistan T20 matchಗೆ ಕ್ಷಣಗಣನೆ: ಕೊಲಂಬೊದಲ್ಲಿ ಹೈವೋಲ್ಟೇಜ್ ಕಾದಾಟಕ್ಕೆ...

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ – ರಾಜ್ಯದ ಜಿಡಿಪಿ...

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ ಮನವಿ

ಬಿಕ್ಲು ಶಿವ ಹತ್ಯೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಕಸ್ಟಡಿಗೆ ಸಿಐಡಿ...

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ

ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ AQI ಏರಿಕೆ: ಮಂಗಳೂರು ‘ಅನಾರೋಗ್ಯಕರ’ ಮಟ್ಟಕ್ಕೆ ಬೆಂಗಳೂರು:...