ನಟ ಚೇತನ್ ಗೆ ನೋಟಿಸ್

Date:

ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪದಡಿ ದಾಖಲಾಗಿರುವ ಪ್ರಕರಣದಲ್ಲಿ ನಟ ಚೇತನ್‌ಗೆ ಬಸವನಗುಡಿ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ವಿಪ್ರ ಯುವ ವೇದಿಕೆ ಅಧ್ಯಕ್ಷ ಪವನ್‌ ಕುಮಾರ್‌ ಶರ್ಮಾ ಎಂಬುವರು ನಟ ಚೇತನ್‌ ವಿರುದ್ಧ ದೂರು ನೀಡಿದ್ದಾರೆ.


ಧಾರ್ಮಿಕ ಭಾವನೆ ಕೆರಳಿಸುವುದು ಐಪಿಸಿ 129(ಎ) ಹಾಗೂ ದ್ವೇಷ ಭಾವನೆ ಹೆಚ್ಚಿಸುವ ಐಪಿಸಿ 153 (ಬಿ) ಆರೋಪ-ದಡಿ ಎಫ್‌ಐಆರ್‌ ದಾಖಲಾಗಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ. ”ಪ್ರಕರಣಕ್ಕೆ ಸಂಬಂಧಪಟ್ಟ ವಿಡಿಯೋಗಳನ್ನು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಈ ವಿಡಿಯೊಗಳನ್ನು ಯಾವ ಐಡಿಗಳಿಂದ ಅಪ್‌ಲೋಡ್‌ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿ ತನಿಖೆಗೆ ಸಹಕರಿಸಬೇಕು” ಎಂದು ನೋಟಿಸ್‌ನಲ್ಲಿ ಪೊಲೀಸರು ಕೋರಿದ್ದಾರೆ. ಬುಧವಾರ ಬೆಳಗ್ಗೆ ಬಸವನಗುಡಿ ಠಾಣೆಗೆ ಹೋಗುತ್ತಿದ್ದೇನೆ ಎಂದು ಚೇತನ್ ಹೇಳಿದ್ದಾರೆ.
ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ನಟ ಚೇತನ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಕೆ.ದಿವಾಕರ್‌ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಆಗ್ರಹಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...