ನಟ ದರ್ಶನ್ ಅರೆಸ್ಟ್: ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ !

Date:

ಬೆಂಗಳೂರು: ನಟ ದರ್ಶನ್ ಅರೆಸ್ಟ್ ಆಗಿರುವ ಸಂಬಂಧ ಪೊಲೀಸ್ ಆಯುಕ್ತ ಬಿ ದಯಾನಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ‘ಜೂನ್ 9 ರಂದು ಭಾನುವಾರದಂದು ಕಾಮಾಕ್ಷಿಪಾಳ್ಯದಲ್ಲಿ ಅಪರಿಚಿತ ಶವವೊಂದು ಸಿಕ್ಕಿತ್ತು. ಆತನ ದೇಹದ ಮೇಲೆ ಇದ್ದ ಗಾಯಗಳನ್ನು ಗಮನಿಸಿ ಕಾಮಾಕ್ಷಿಪಾಳ್ಯದ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೆವು.
ಅದಾದ ಬಳಿಕ ಸಿಸಿಟಿವಿ ಹಾಗೂ ಇತರೆ ತಾಂತ್ರಿಕ ಆಧಾರದ ಮೇಲೆ ವ್ಯಕ್ತಿಯ ಗುರುತು ಪರಿಚಯ ಗೊತ್ತಾಗಿದ್ದು, ಆತ ಚಿತ್ರದುರ್ಗದ ವಾಸಿ ರೇಣುಕಾ ಸ್ವಾಮಿ ಎಂಬ ಗುರುತು ಪತ್ತೆಯಾಯ್ತು ಎಂದಿದ್ದಾರೆ. ಮುಂದಿನ ತನಿಖೆಯಲ್ಲಿ ಕನ್ನಡ ಚಿತ್ರರಂಗದ ನಟ ಹಾಗೂ ಆತನ ಸಹಚರರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ರೇಣುಕಾ ಸ್ವಾಮಿ ದರ್ಶನ್ ಪತ್ನಿಗೆ ಅವಾಚ್ಯ ಸಂದೇಶಗಳನ್ನು ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದರು. ಈ ವರೆಗೆ ಸುಮಾರು 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಶ್ನೋತ್ತರ ನಡೆಯುತ್ತಿದೆ. ಮುಂದಿನ ಕಾನೂನು ಕ್ರಮಗಳನ್ನು ನಡೆಸಲಾಗುತ್ತದೆ. ತನಿಖೆಯ ಆರಂಭಿಕ ಹಂತದಲ್ಲಿ ಇರುವ ಕಾರಣ ಪ್ರಕರಣದ ಬಗೆಗೆ ಈಗ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಆಗುವುದಿಲ್ಲ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...