No menu items!
1.1 C
Munich
Monday, April 20, 2026

ನಟ ದರ್ಶನ್ ಕೇಸ್ ಸಂಬಂಧ ಗೃಹ ಸಚಿವರು ಹೇಳಿದ್ದೇನು ?

Must read

ನಟ ದರ್ಶನ್ ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಟಿ ಪವಿತ್ರ ಗೌಡ ಜೈಲು ಪಾಲಾಗಿದ್ದಾರೆ. ದರ್ಶನ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ನಗರದಲ್ಲಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪ್ರಕರಣದ ಬಗ್ಗೆ ಪೂರ್ಣ ತನಿಖೆ ಆಗಿಲ್ಲ, ಇನ್ನಷ್ಟು ತನಿಖೆ ಆಗಬೇಕು. ಕೋರ್ಟ್ ಮತ್ತೆ ಕಸ್ಟಡಿಗೆ ನೀಡಿರೋದ್ರಿಂದ​ ತನಿಖೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಶಿಕ್ಷಣ ಇಲಾಖೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಸಂಪುಟ ಸಭೆಯಲ್ಲಿ ನಟ ದರ್ಶನ್ ಪ್ರಕರಣದ ಬಗ್ಗೆ ಚರ್ಚೆಯಾಗಿಲ್ಲ. ಯಾವ ಶಾಸಕರು, ಸಚಿವರು ಇಂತಹ ವಿಚಾರದಲ್ಲಿ ತಲೆಹಾಕುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ದರ್ಶನ್ ಪ್ರಕರಣ ಚರ್ಚೆಗೆ ಬಂದಿಲ್ಲ. ಕಾನೂನು ತನ್ನ ಕೆಲಸವನ್ನು ಗಟ್ಟಿಯಾಗಿ ಮಾಡ್ತಿದೆ ಎಂದು ಹೇಳಿದ್ದಾರೆ.

- Advertisement -spot_img

More articles

- Advertisement -spot_img

Latest article