ನಟ ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್…..!

Date:

ನಟ ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​..!

ಆಂಧ್ರಪ್ರದೇಶದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಪವರ್​ ಸ್ಟಾರ್​​ ಪವನ್​ ಕಲ್ಯಾಣ್​ ಹತ್ಯಗೆ ಸ್ಕೆಚ್​ ಹಾಕಿದ್ದಾರಾ..? ಇಂಥಾದ್ದೊಂದು ಆತಂಕವನ್ನ ಸ್ವತಃ ಪವನ್​ ಕಲ್ಯಾಣ್ ಅವರೇ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪಶ್ಚಿಮ ಗೋಧಾವರಿ ಜಿಲ್ಲೆಯಲ್ಲಿ ನಡೆದ ಜನಸೇನಾ ಯಾತ್ರೆಯಲ್ಲಿ ಅವರು ಇಂಥಾದ್ದೊಂದು ಆತಂಕ ವ್ಯಕ್ತ ಪಡಿಸಿದ್ದಾರೆ.
ಮಂಗಳವಾರ ಪಶ್ಚಿಮ ಗೋದಾವರಿಯಲ್ಲಿ ಜನಸೇನಾ ಪಕ್ಷದ ವತಿಯಿಂದ ಪ್ರಜಾ ಹೋರಾಟ ಯಾತ್ರೆಯನ್ನ ಆಯೋಜಿಸಲಾಗಿತ್ತು. ಪವನ್​ ಕಲ್ಯಾಣ್​​ ಆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ನೂಕು ನುಗ್ಗಲು ಉಂಟಾಗುತ್ತೆ. ಅಷ್ಟೇ ಅಲ್ಲದೇ, ನಾಲ್ಕು ಯುವಕರು ಅನುಮಾನಾಸ್ಪದವಾಗಿ ಪವನ್​ ಕಲ್ಯಾಣ್​ ಅವರ ಸುತ್ತ ಓಡಾಡಿದ್ದರು. ಕೂಡಲೇ ಕಾರ್ಯಕರ್ತರು ಪವನ್​ ಅವರನ್ನ ಸುರಕ್ಷಿತವಾಗಿ ಕರೆದೊಯ್ದಿದ್ದರು. ಈ ನೂಕು ನುಗ್ಗಲಿನ ಬಳಿಕ ಮಾತನಾಡಿದ ಪವನ್​, ಚುನಾವಣೆಗೂ ಮುನ್ನ ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ, ಇದು ಆಡಳಿತ ಪಕ್ಷ ಅಥವಾ ವಿರೋಧ ಪಕ್ಷದವರ ಸಂಚಾಗಿರಬಹುದು ಎನ್ನುವ ಅನುಮಾನವನ್ನ ಕೂಡ ವ್ಯಕ್ತಪಡಿಸಿದ್ದರು. ಜೊತೆಗೆ ಪೊಲೀಸ್​ ಭದ್ರತೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು.
ಪವನ್​ ಕಲ್ಯಾಣ್​ ಇಂಥಾದ್ದೊಂದು ಆರೋಪ ಮಾಡುತ್ತಿದ್ದಂತೆ ಸಿಸಿಟಿವಿ ಕ್ಯಾಮರಾಗಳನ್ನ ಪರಿಶೀಲನೆ ಮಾಡಿದ ಪೊಲೀಸರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ನಾಲ್ಕು ಯುವಕರನ್ನ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಅವರೆಲ್ಲಾ ಪವನ್​ ಕಲ್ಯಾಣ್​ ಅವರ ಅಭಿಮಾನಿಗಳು ಎನ್ನುವ ಸಂಗತಿ ತಿಳಿದು ಬಂದಿದೆ. ಒಟ್ಟಾರೆ ಈ ಘಟನೆಯ ಬಳಿಕ ಜನಸೇನಾ ನಾಯಕ ಹಾಗೂ ಪವರ್​ ಸ್ಟಾರ್​ ಪವನ್​ ಕಲ್ಯಾಣ್​ ಅವರಿಗೆ ಹೆಚ್ಚಿನ ಪೊಲೀಸ್​ ಭದ್ರತೆ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...