ನಟ ಪವನ್ ಕಲ್ಯಾಣ್ ಹತ್ಯೆಗೆ ಸ್ಕೆಚ್…..!

Date:

ನಟ ಪವನ್​ ಕಲ್ಯಾಣ್​ ಹತ್ಯೆಗೆ ಸ್ಕೆಚ್​..!

ಆಂಧ್ರಪ್ರದೇಶದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ಪವರ್​ ಸ್ಟಾರ್​​ ಪವನ್​ ಕಲ್ಯಾಣ್​ ಹತ್ಯಗೆ ಸ್ಕೆಚ್​ ಹಾಕಿದ್ದಾರಾ..? ಇಂಥಾದ್ದೊಂದು ಆತಂಕವನ್ನ ಸ್ವತಃ ಪವನ್​ ಕಲ್ಯಾಣ್ ಅವರೇ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪಶ್ಚಿಮ ಗೋಧಾವರಿ ಜಿಲ್ಲೆಯಲ್ಲಿ ನಡೆದ ಜನಸೇನಾ ಯಾತ್ರೆಯಲ್ಲಿ ಅವರು ಇಂಥಾದ್ದೊಂದು ಆತಂಕ ವ್ಯಕ್ತ ಪಡಿಸಿದ್ದಾರೆ.
ಮಂಗಳವಾರ ಪಶ್ಚಿಮ ಗೋದಾವರಿಯಲ್ಲಿ ಜನಸೇನಾ ಪಕ್ಷದ ವತಿಯಿಂದ ಪ್ರಜಾ ಹೋರಾಟ ಯಾತ್ರೆಯನ್ನ ಆಯೋಜಿಸಲಾಗಿತ್ತು. ಪವನ್​ ಕಲ್ಯಾಣ್​​ ಆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ನೂಕು ನುಗ್ಗಲು ಉಂಟಾಗುತ್ತೆ. ಅಷ್ಟೇ ಅಲ್ಲದೇ, ನಾಲ್ಕು ಯುವಕರು ಅನುಮಾನಾಸ್ಪದವಾಗಿ ಪವನ್​ ಕಲ್ಯಾಣ್​ ಅವರ ಸುತ್ತ ಓಡಾಡಿದ್ದರು. ಕೂಡಲೇ ಕಾರ್ಯಕರ್ತರು ಪವನ್​ ಅವರನ್ನ ಸುರಕ್ಷಿತವಾಗಿ ಕರೆದೊಯ್ದಿದ್ದರು. ಈ ನೂಕು ನುಗ್ಗಲಿನ ಬಳಿಕ ಮಾತನಾಡಿದ ಪವನ್​, ಚುನಾವಣೆಗೂ ಮುನ್ನ ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೇ, ಇದು ಆಡಳಿತ ಪಕ್ಷ ಅಥವಾ ವಿರೋಧ ಪಕ್ಷದವರ ಸಂಚಾಗಿರಬಹುದು ಎನ್ನುವ ಅನುಮಾನವನ್ನ ಕೂಡ ವ್ಯಕ್ತಪಡಿಸಿದ್ದರು. ಜೊತೆಗೆ ಪೊಲೀಸ್​ ಭದ್ರತೆಯ ಬಗ್ಗೆಯೂ ಪ್ರಶ್ನೆ ಮಾಡಿದ್ದರು.
ಪವನ್​ ಕಲ್ಯಾಣ್​ ಇಂಥಾದ್ದೊಂದು ಆರೋಪ ಮಾಡುತ್ತಿದ್ದಂತೆ ಸಿಸಿಟಿವಿ ಕ್ಯಾಮರಾಗಳನ್ನ ಪರಿಶೀಲನೆ ಮಾಡಿದ ಪೊಲೀಸರು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ನಾಲ್ಕು ಯುವಕರನ್ನ ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಅವರೆಲ್ಲಾ ಪವನ್​ ಕಲ್ಯಾಣ್​ ಅವರ ಅಭಿಮಾನಿಗಳು ಎನ್ನುವ ಸಂಗತಿ ತಿಳಿದು ಬಂದಿದೆ. ಒಟ್ಟಾರೆ ಈ ಘಟನೆಯ ಬಳಿಕ ಜನಸೇನಾ ನಾಯಕ ಹಾಗೂ ಪವರ್​ ಸ್ಟಾರ್​ ಪವನ್​ ಕಲ್ಯಾಣ್​ ಅವರಿಗೆ ಹೆಚ್ಚಿನ ಪೊಲೀಸ್​ ಭದ್ರತೆ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...