ನಡೆದಾಡುವ ದೇವರ ಹುಟ್ಟೂರನ್ನ ದತ್ತು ಪಡೆಯಲ್ಲಿದ್ದಾರೆ ಸಚಿವ ಡಿ.ಕೆ.ಶಿವಕುಮಾರ್..

Date:

ನಡೆದಾಡುವ ದೇವರ ಹುಟ್ಟೂರನ್ನ ದತ್ತು ಪಡೆಯಲ್ಲಿದ್ದಾರೆ ಸಚಿವ ಡಿ.ಕೆ.ಶಿವಕುಮಾರ್..

ಶಿವೈಕ್ಯರಾದ ಶ್ರೀಗಳ ಅಂತ್ಯ ಸಂಸ್ಕಾರ ಇಂದು ಸಂಜೆ 5 ಗಂಟೆ ಸುಮಾರಿಗೆ ಮಠದಲ್ಲಿ ನಡೆಯಲಿದೆ.. ನಿನ್ನೆಯಿಂದಲು ಭಕ್ತಸಾಗರ ತುಮಕೂರು ಶ್ರೀ ಸಿದ್ದಗಂಗಾ ಮಠದ ಕಡೆ ಆಗಮಿಸುತ್ತಿದ್ದು, ಅಗಲಿದ ನಡೆದಾಡುವ ದೇವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.. ಇತ್ತಕಡೆ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ ನೀರವ ಮೌನ ಆವರಿಸಿದೆ.. ಶ್ರೀಗಳಲ್ಲಿದ್ದ ಇಡೀ ಗ್ರಾಮಕ್ಕೆ ಅನಾಥ ಭಾವ ಕಾಡುತ್ತಿದೆ…

ಸದ್ಯ ಶ್ರೀಗಳ‌ ಜನ್ಮಸ್ಥಳವಾದ ಈ ಹಳ್ಳಿಯಲ್ಲಿ ಸುಮಾರು 50 ಮನೆಗಳಿವೆ ಎಂದು ಹೇಳಲಾಗುತ್ತಿದೆ.. ಮೂಲಸೌಕರ್ಯ ಕೊರತೆ ಇರುವ ಈ ಹಳ್ಳಿ ಅಭಿವೃದ್ಧಿಯಾಗಬೇಕಿದೆ..‌ ಶುದ್ದ ಕುಡಿಯುವ ನೀರು, ರಸ್ತೆ, ಒಳಚರಂಡಿ ಸೇರಿದಂತೆ ಮೂಲಸೌಕರ್ಯಗಳನ್ನ ಮಾಡಬೇಕಿದೆ.. ಹೀಗಾಗೆ ಸಚಿವರಾದ ಡಿ.ಕೆ.ಶಿವಕುಮಾರ್ ಈ ಹಳ್ಳಿಯನ್ನ ದತ್ತು ಪಡೆಯುವುದಾಗಿ ತಿಳಿಸಿದ್ದಾರೆ…

ತಾವೇ ದತ್ತು ಪಡೆದು ಇಡೀ ಗ್ರಾಮದ ಅಭಿವೃದ್ಧಿ ಮಾಡುವುದಾಗಿ ಹೇಳಿದ್ದಾರೆ.. ಡಿ.ಕೆ.ಶಿವಕುಮಾರ್ ಅವರು ಶ್ರೀಗಳ ಭಕ್ತರಾಗಿದ್ದು, ಹಲವು ಬಾರಿ ಅವರನ್ನ ಭೇಟಿ ಮಾಡಿದ್ದಾರೆ.. ರಾಮನಗರ ವ್ಯಾಪ್ತಿಗೆ ಒಳ ಪಡುವ ಈ ಗ್ರಾಮವನ್ನ ಅವರ ನೆನಪಿಗಾಗಿ ಅಭಿವೃದ್ಧಿ ಪಡಿಸಿ ಮಾದರಿ ಗ್ರಾಮವನ್ನಾಗಿಸುವ ಆಸೆಯನ್ನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ..

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...