ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆಗಳು; ಜನರಲ್ಲಿ ಆತಂಕ

Date:

ತಾಲ್ಲೂಕಿನ ಹರನಹಳ್ಳಿ ಗ್ರಾಮದ ಹೊರವಲಯದಲ್ಲಿನ ಹಳ್ಳದಲ್ಲಿ ಮೊಸಳೆಗಳು ಕಾಣಿಸಿಕೊಂಡಿದ್ದು ಸಾರ್ವಜನಿಕರು ಆತಂಕದಲ್ಲಿದ್ದಾರೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ನದಿಯ ನೀರಿನ ಜೊತೆಗೆ ಮೊಸಳೆಗಳು ಹರಿದು ಬಂದು ಹಳ್ಳದಲ್ಲಿ ಸೇರಿಕೊಂಡಿವೆ.

ಹಳ್ಳದಲ್ಲಿ ನೀರು ಕಡಿಮೆಯಾಗಿರುವುದರಿಂದ ದಂಡೆಯ ಮೇಲೆ ಬರುತ್ತಿವೆ.

ರಾಜೋಳ್ಳಿ ಹಾಗೂ ಹರನಹಳ್ಳಿ ಗ್ರಾಮದ ಜನರು ಹಳ್ಳದ ನೀರನ್ನು ಬಳಸುತ್ತಿದ್ದು, ಜಮೀನುಗಳಿಗೆ ಪಂಪ್ ಸೆಟ್ ಗಳನ್ನು ಹಳ್ಳದಲ್ಲಿ ಅಳವಡಿಸಿದ್ದಾರೆ. ಜಾನುವಾರುಗಳು ನೀರು ಕುಡಿಯಲು ಹಳ್ಳಕ್ಕೆ ಬರುವುದರಿಂದ ಜನರು ಆತಂಕಗೊಂಡಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮೊಸಳೆಗಳನ್ನು ಹಿಡಿದು ಸ್ಥಳಾಂತರಿಸುವಂತೆ ಆಗ್ರಹಿಸುತ್ತಿದ್ದಾರೆ.

 

ತಾಲ್ಲೂಕು ವಲಯ ಅರಣ್ಯಧಿಕಾರಿ ರಾಜೇಶ ನಾಯಕ ಮಾತನಾಡಿ, ತುಂಗಭದ್ರಾ ನದಿ ಮೊಸಳೆಗಳ ವಾಸ ಸ್ಥಾನವಾಗಿದೆ. ನದಿಯಲ್ಲಿ ಹೆಚ್ಚಿನ ನೀರು ಬಂದ ಕಾರಣ ಕೆರೆ ಮತ್ತು ಹಳ್ಳಗಳಲ್ಲಿ ಮೊಸಳೆಗಳು ಸೇರಿಕೊಂಡಿರುವ ಸಾಧ್ಯತೆಗಳಿವೆ. ಪರಿಶೀಲನೆ ನಡೆಸಿ ಇಲಾಖೆಯ ಸಿಬ್ಬಂದಿಯನ್ನು ಗ್ರಾಮಕ್ಕೆ ಕಳುಹಿಸಿ ಮೊಸಳೆಗಳನ್ನು ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...