ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ !

Date:

ಮಂಡ್ಯ: ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರ್ಪಡೆಗೆ ತಾಂತ್ರಿಕವಾಗಿ ಅಡ್ಡಿಯಾಗಿದೆ. ಆ ಕಾರಣಕ್ಕಾಗಿ ನಾನು ಬಾಹ್ಯ ಬೆಂಬಲ ನೀಡಿದ್ದು, ಇದು ಬಿಜೆಪಿ ರಾಷ್ಟ್ರೀಯ ನಾಯಕರೆ ನನಗೆ ಹೇಳಿದ್ದಾರೆ. ನಾನು ಮೋದಿ ಹಾಗೂ ಜೆ.ಪಿ‌.ನಡ್ಡಾ ಅವರನ್ನು ಭೇಟಿಯಾದಾಗಲೂ ಮಂಡ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ್ದೇನೆ. ಬಿಜೆಪಿಯೇ ಮಂಡ್ಯ ಟಿಕೆಟ್ ಉಳಿಸಿಕೊಳ್ಳಬೇಕು ಎಂದು ಕೇಳಿದ್ದಾರೆ. ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ ಎಂದರು.
ಕಾಂಗ್ರೆಸ್‌ಗೆ ಯಾರು ಆಹ್ವಾನ ಕೊಟ್ಟರು ಹೇಳಲಿ ಎಂದು ಚಲುವರಾಯಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ 25 ವರ್ಷ ಅಂಬರೀಶ್ ಇದ್ದರು. ಪರಿಚಯಸ್ಥರು ಇರುವ ಪಕ್ಷ ಅದು ಯಾವುದಾದರೂ ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಪಕ್ಷಕ್ಕೆ ಕರೆದಿದ್ದಾರೆ. ಆದರೆ ಅದನ್ನ ಅಧಿಕೃತ ಆಹ್ವಾನ ಎನ್ನಲು ಆಗಲ್ಲ. ಚಲುವರಾಯಸ್ವಾಮಿ ನನ್ನನ್ನು ವೈಯಕ್ತಿಕವಾಗಿ ಕೇಳಿದ್ರೆ ನಾನು ಹೇಳ್ತೀನಿ‌. ಆದರೆ ಕರೆದವರ ಹೆಸರು ಬಹಿರಂಗ ಮಾಡಿ ಮುಜುಗರ ಮಾಡಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗುತ್ತಿಗೆದಾರರ ಬಾಕಿ- ಸಂಬಂಧಪಟ್ಟ ಸಚಿವರಿಂದ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಯಾವುದೇ ಸಂಘಸಂಸ್ಥೆಗಳ...

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿ ಖಾತಾ ಇದ್ದವರಿಗೆ ಹಾಗೂ ಇಲ್ಲದವರಿಗೂ ಎ ಖಾತಾ ವಿತರಣೆ: ಡಿಸಿಎಂ...

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ!

ಗ್ರಾಹಕರಿಗೆ ಖುಷಿಯ ಸುದ್ದಿ: ದೀಪಾವಳಿಗೆ ಮುನ್ನ ಚಿನ್ನದ ಬೆಲೆಯಲ್ಲಿ ಇಳಿಕೆ! ಚಿನ್ನದ ಬೆಲೆಯಲ್ಲಿ...

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ: 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...