“ನನ್ನ ಅಭಿಮಾನಿಗಳದ್ದೇ ತಪ್ಪು ಸಾರಿ ಜಗ್ಗಣ್ಣ”

Date:

ನವರಸನಾಯಕ ಜಗ್ಗೇಶ್ ಅವರು ದರ್ಶನ್ ಅಭಿಮಾನಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನುವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಖಂಡಿಸಿ ದರ್ಶನ್ ಅವರ ಅಭಿಮಾನಿಗಳು ಜಗ್ಗೇಶ್ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾಗ ಹೋಗಿ ಮುತ್ತಿಗೆ ಹಾಕಿ ಏಕವಚನದಲ್ಲಿ ಮಾತನಾಡಿದ್ದರು.

 

ಹಿರಿಯ ನಟ ಎಂಬುದನ್ನೂ ನೋಡದೇ ಜಗ್ಗೇಶ್ ಅವರಿಗೆ ದರ್ಶನ್ ಅಭಿಮಾನಿಗಳು ಮನಬಂದಂತೆ ಮಾತನಾಡಿ ವಿವಾದ ಸೃಷ್ಟಿಸಿಬಿಟ್ಟರು. ಇನ್ನು ಇಷ್ಟೆಲ್ಲಾ ಆಗುತ್ತಿದ್ದರೂ ಸಹ ದರ್ಶನ್ ಅವರು ಮಾತ್ರ ಈ ಕುರಿತು ಮಾತನಾಡಿರಲಿಲ್ಲ.

 

 

ಆದರೆ ಇದೀಗ ಈ ಕುರಿತು ಟಿವಿ 9 ವಾಹಿನಿಯ ಸಂದರ್ಶನದಲ್ಲಿ ಮಾತನಾಡಿರುವ ದರ್ಶನ್ ಇದರ ಬಗ್ಗೆ ನನಗೇನೂ ಗೊತ್ತಿಲ್ಲ , ಇಷ್ಟು ದೊಡ್ಡ ವಿವಾದ ಆಗಿರೋದು ನನ್ನ ಗಮನಕ್ಕೆ ಬಂದಿರಲಿಲ್ಲ , ಹೀಗಾಗಿ ನಾನೇನೂ ಮಾತನಾಡುವುದಕ್ಕೆ ಹೋಗಿರಲಿಲ್ಲ. ಈಗ ಮಾತನಾಡುವ ಸಮಯ ಬಂದಿದೆ ಮಾತನಾಡ್ತಾ ಇದ್ದೇನೆ , ನನ್ನ ಅಭಿಮಾನಿಗಳಿಂದ ತೊಂದರೆಯಾಗಿದ್ದರೆ , ಬೇಜಾರಾಗಿದ್ದರೆ ದಯವಿಟ್ಟು ಕ್ಷಮಿಸಿ ಜಗ್ಗೇಶ್ ಸರ್ ಎಂದು ದರ್ಶನ್ ಅವರು ವಿವಾದಕ್ಕೆ ತೆರೆ ಎಳೆದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...