ನನ್ನ ಗ್ರಾಮ ವಾಸ್ತವ್ಯ ಬಿಜೆಪಿಗೆ ನುಂಗಲಾರದ ತುಪ್ಪವಾಗಿದೆ ಎಂದು ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ವ್ಯಂಗ್ಯ ಮಾಡಿದ್ದಾರೆ .

Date:

ಉಜಳಂಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀಕೆ ಮಾಡುವವರಿಗೆಲ್ಲಾ ಉತ್ತರ ಕೊಡಲ್ಲ. ಪ್ರತಿಯೊಬ್ಬರ ನೋವಿಗೆ ಸ್ಪಂದಿಸಿದಾಗ ತೃಪ್ತಿ ಆಗುತ್ತೆ, ಮೂರು ಕಡೆ ಗ್ರಾಮ ವಾಸ್ತವ್ಯ ಮಾಡಿದ್ದೇವೆ, ಜನತಾ ದರ್ಶನದಿಂದ ಜನಸಾಮಾನ್ಯರಿಗೆ ಲಾಭವಾಗಲಿದೆ. ಮುಖ್ಯಮಂತ್ರಿ ಕಚೇರಿಯೇ ಜನತೆಗೆ ನೇರವಾಗಿ ಸ್ಪಂದಿಸಲಿದೆ. ಬಿಜೆಪಿ ಟೀಕೆಗೆ ಉತ್ತರ ಕೊಡುವ ಅಗತ್ಯವಿಲ್ಲ, ಅರ್ಥವಿಲ್ಲದ ಪ್ರಶ್ನೆಗೆ ಸುಮ್ಮನಿರುವುದೇ ಸೂಕ್ತ ನನ್ನ ಗ್ರಾಮ ವಾಸ್ತವ್ಯ ಬಿಜೆಪಿಗೆ ನುಂಗಲಾರದ ತುಪ್ಪವಾಗಿದೆ.

ಅವರ ಪಾಡಿಗೆ ಅವರು ಪ್ರತಿಭಟನೆ ಮಾಡಲಿ, ನನ್ನ ಪಾಡಿಗೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ ತಮ್ಮ ವಿದೇಶ ಪ್ರವಾಸ ವಿಚಾರದ ಬಗ್ಗೆ ಮಾತನಾಡಿದ ಅವರು, ಆದಿಚುಂಚನಗಿರಿ ಶ್ರೀಗಳು ನ್ಯೂಜೆರ್ಸಿಯಲ್ಲಿ ದೇಗುಲ ಕಟ್ಟಿಸುತ್ತಿದ್ದಾರೆ. ಶಂಕುಸ್ಥಾಪನೆಗೆ ನಾನೇ ಬರಬೇಕೆಂದು ಶ್ರೀಗಳು ಒತ್ತಾಯ ಮಾಡ್ತಿದ್ದಾರೆ. ನಾನೇನೂ ಸರ್ಕಾರದ ವೆಚ್ಚದಲ್ಲಿ ಹೋಗುತ್ತಿಲ್ಲ. ಅಮೇರಿಕಕ್ಕೆ ನನ್ನ ಸ್ವಂತ ಖರ್ಚಿನಲ್ಲಿ ಹೋಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು?

ಬಿಳಿ, ಕೆಂಪು, ಗುಳ್ಳೆಗಳು: ನಾಲಿಗೆಯ ಬದಲಾವಣೆಗಳ ಅರ್ಥ ಏನು? ಆಹಾರ ಸರಿಯಾಗಿ ಜೀರ್ಣವಾದರೆ...