ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಬೀರಿದೆ !

Date:

ಬೆಂಗಳೂರು: ನನ್ನ ಪಕ್ಷಾಂತರ ಪ್ರಭಾವ ಪಂಚರಾಜ್ಯ ಚುನಾವಣೆ ಮೇಲೂ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. ಈ ಸಂಬಂಧ ಮಾತನಾಡಿದ ಅವರು,ನನ್ನ ಪಕ್ಷಾಂತರದ ಪ್ರಭಾವ ಈಗ ಪಂಚರಾಜ್ಯಗಳ ಚುನಾವಣೆಯ ಮೇಲೂ ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಬಿಜೆಪಿ ಟಿಕೆಟ್ ನೀಡಿದೆ ಎಂದರು
ಕರ್ನಾಟಕದಲ್ಲಿ ಹಿರಿಯರ ನಿರ್ಲಕ್ಷಿಸಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಹೀಗಾಗಿ ಪಂಚರಾಜ್ಯಗಳ ಚುನಾವಣೆಯಲ್ಲಿ ಈಗ ಹಿರಿಯರಿಗೆ ಮಣೆ ಹಾಕಲಾಗಿದೆ. ಎಲ್ಲ ರಾಜ್ಯಗಳಲ್ಲೂ ನಿಯಮ ಒಂದೇ ಅನ್ವಯ ಆಗಬೇಕಲ್ಲವೆ? ಎಂದವರು ಪ್ರಶ್ನಿಸಿದರು. ಈಚೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರನ್ನು ದೆಹಲಿಗೆ ಕರೆಸಿ 3 ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯ ವರಿಷ್ಠರು ತೋರಲಿಲ್ಲ ವೇಕೆ? ಇನ್ನು, ವಯಸ್ಸಿನ ನೆಪದಲ್ಲಿ ಲಾಲಕೃಷ್ಣ ಅಡ್ವಾಣಿ, ಮುರಳಿ ಮನೋಹರ್ ಜೋಶಿ ಅವರನ್ನು ಮನೆಗೆ ಕಳುಹಿಸಿದರು. ಆದರೆ, 3-4 ಮಾಜಿ ಮುಖ್ಯಮಂತ್ರಿಗಳೂ ಸೇರಿ, ಈಗ 80 ವರ್ಷ ಆದವರಿಗೂ ಟಿಕೆಟ್ ನೀಡಿದ್ದಾರೆ. ಇದಕ್ಕೆ ಮೂಲ ಕಾರಣ ಜಗದೀಶ್ ಶೆಟ್ಟರ್ ಪ್ರಭಾವ ಎಂದವರು ಪ್ರತಿಪಾದಿಸಿದರು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...