No menu items!
9.8 C
Munich
Friday, May 15, 2026

ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ!

Must read

ಬೀದರ್: ನಮ್ಮವರು ಯಾರೂ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಪಾತಾಳಕ್ಕೆ ಹೋಗಿ ಯಾರಾದರೂ ಬೀಳ್ತಾರಾ ಎಂದು ಆಪರೇಷನ್ ಹಸ್ತದ ವಿಚಾರಕ್ಕೆ ಬೀದರ್ ನಲ್ಲಿ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವ್ಯಂಗ್ಯವಾಡಿದ್ದಾರೆ. ಬಿಜೆಪಿ ಈಗಾಗಾಲೇ ಮುಳುಗುವ ಹಡಗಾಗಿದ್ದು, ಮುಳುಗುವ ಹಡುಗಿನಲ್ಲಿ ಯಾರಾದರೂ ಕುಳಿತುಕೊಳ್ತಾರಾ, ನಾವು ಆಹ್ವಾನ ಮಾಡಿದ್ರೆ ಬಿಜೆಪಿಗೆ ಬಿಜೆಪಿ, ಜೆಡಿಎಸ್ಗೆ ಜೆಡಿಎಸ್ ಕಿತ್ಕೊಂಡು ಬರುತ್ತೆ. ಆದರೆ ನಾವು ಹಾಗೇ ಮಾಡಲ್ಲ ಎಂದರು.
ನಮ್ಮ ತತ್ವ ಸಿದ್ಧಾಂತಕ್ಕೆ ಯಾರು ಒಪ್ಪಿಗೆ ಕೊಡುತ್ತಾರೆ, ನಾಯಕತ್ವಕ್ಕೆ ಯಾರು ಒಪ್ಪಿಗೆ ಕೊಡುತ್ತರೋ ಅಂತವರನ್ನು ಪರಿಶೀಲನೆ ಮಾಡಿ ಸೇರಿಸುಕೊಳ್ಳುತ್ತೇವೆ ಎಂದ್ರು ಖಂಡ್ರೆ ಬಿಜೆಪಿಗೆ ಟಾಂಗ್ ನೀಡಿದರು. ಇನ್ನೂ ಆರ್ಡಿ ಪಾಟೀಲ್ ಎಸ್ಕೇಪ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಖಂಡ್ರೆ ಸರ್ಕಾರ ಕಾನುನುಬದ್ಧವಾಗಿ ಕ್ರಮ ಕೈಗೊಳ್ಳಿ ಅಂತಾ ತನಿಖಾಧಿಕಾರಿಗಳಿಗೆ ಹೇಳುತ್ತೆನೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article