No menu items!
15.2 C
Munich
Sunday, May 24, 2026

ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ , ನಮ್ಮ ಸರ್ಕಾರ 5 ವರ್ಷ ಬಂಡೆಯಂತೆ ಸ್ಥಿರ: ಸಿಎಂ ಸಿದ್ದರಾಮಯ್ಯ

Must read

ನಾನು, ಡಿಕೆಶಿ ಚೆನ್ನಾಗಿಯೇ ಇದ್ದೇವೆ , ನಮ್ಮ ಸರ್ಕಾರ 5 ವರ್ಷ ಬಂಡೆಯಂತೆ ಸ್ಥಿರ: ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಎಂಬ ಭವಿಷ್ಯ ಸ್ಫೋಟಗೊಂಡಿದೆ. ಜುಲೈ ಒಂದೇ ತಿಂಗಳು ಮಧ್ಯದಲ್ಲಿದೆ. ಆಗಸ್ಟ್-ಸೆಪ್ಟೆಂಬರ್ ನಂತ್ರ ಬದಲಾವಣೆ ಗಾಳಿ ಬೀಸುತ್ತೆ ಅಂತ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಇದ್ರ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈಗಳನ್ನು ಎತ್ತಿ ಹಿಡಿದು ನಾವು ಒಂದೇ, ಯಾವಾಗಲೂ ಒಗ್ಗಟ್ಟಾಗಿಯೇ ಇರ್ತೀವಿ,
ನಮ್ಮ ಸರ್ಕಾರ ಬಂಡೆ ತರ 5 ವರ್ಷ ಇರುತ್ತೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತಾಡಿದ ಅವರು, ಇನ್ನೂ, ಇದೇ ವೇಳೆ ಸುರ್ಜೆವಲಾ ರಾಜ್ಯಕ್ಕೆ ಬರುತ್ತಿರುವ ವಿಚಾರದ ಬಗ್ಗೆ ಮಾತಾಡಿದ ಸಿಎಂ ಸಿದ್ದರಾಮಯ್ಯನವರು, ಸಂಘಟನೆ ಬಲ ಪಡಿಸಲು ರಾಜ್ಯಕ್ಕೆ ಬರ್ತಿದ್ದಾರೆ.
ಅವರ ಕೆಲ್ಸ ಅವರು ಮಾಡ್ತಾರೆ ಅಂತ ಹೇಳಿದ್ದಾರೆ. ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳುವ ಮೂಲಕ ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್ಗೆ ತಿರುಗೇಟು ನೀಡಿದರು.

- Advertisement -spot_img

More articles

- Advertisement -spot_img

Latest article