ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

Date:

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ತುಮಕೂರು: ಮುಂದೆ ನಾನು ಯಾವ ಬಾವುಟ ಹಿಡಿಯಬೇಕು ಎಂಬುದನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಮಧುಗಿರಿ ತಾಲೂಕಿನ ದೊಡ್ಡೆರಿಯಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, “2004ರಲ್ಲಿ ನಾನು ಜೆಡಿಎಸ್‌ನಿಂದ ಸ್ಪರ್ಧಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ವೈಟ್‌ವಾಶ್ ಮಾಡಿದ್ದೆವು. ಆಗ ಕಾಂಗ್ರೆಸ್‌ನ್ನು ಸಂಪೂರ್ಣ ಮುಗಿಸಿದ್ದೆವು. ಈಗ ಮತ್ತೆ ಆ ಸಂದರ್ಭ ಬರುತ್ತದೆಯೋ ಗೊತ್ತಿಲ್ಲ,” ಎಂದು ಹೇಳಿದರು.
ಇಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ನನ್ನ ಅಭಿಮಾನಿಗಳು ಆಯೋಜಿಸಿದ್ದ ಬೈಕ್ ರ್ಯಾಲಿಯಲ್ಲಿ ಯಾರೂ ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದಿರಲಿಲ್ಲ. ಅದು ಏಕೆ ಎಂಬುದನ್ನು ನಾನೂ ತಿಳಿದಿಲ್ಲ. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ. ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಶಾಶ್ವತ ಮಿತ್ರರೂ ಅಲ್ಲ ಎಂದು ರಾಜಣ್ಣ ಸ್ಪಷ್ಟಪಡಿಸಿದರು.
ಜನರ ಬೆಂಬಲವೇ ನನಗೆ ಆನೆ ಬಲ. ಜನರನ್ನು ನಂಬಿ ನಾನು ರಾಜಕಾರಣ ಮಾಡುತ್ತಿದ್ದೇನೆ. ನನಗೂ ಮಧುಗಿರಿಗೂ ಒಂದು ವಿಶೇಷ ಋಣಾನುಬಂಧವಿದೆ. ತುಮಕೂರಿನಲ್ಲಿ ರಾಜಕೀಯ ನೆಲೆ ಕಂಡುಕೊಳ್ಳಬೇಕು ಎಂದುಕೊಂಡಿದ್ದ ನನಗೆ, ಮಧುಗಿರಿ ಕ್ಷೇತ್ರದ ಜನರು ರಾಜಕೀಯ ಜನ್ಮ ನೀಡಿದರು ಎಂದು ರಾಜಣ್ಣ ಹೇಳಿದರು.

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಕೊಡಬೇಕು ಎಂದು ಒತ್ತಾಯಿಸಿಸುವವರಲ್ಲಿ ನಾವು ಮುಂಚೂಣಿಯಲಿದ್ದೇವೆ: ಸಿದ್ದರಾಮಯ್ಯ ಹಾಸನ: ಮಹಿಳಾ...

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರದ ಬೆಂಬಲವಿಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ: ರಾಜ್ಯ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...