ನಾನು ರಾಜರೋಷವಾಗಿ ಡಿ.ಕೆ.ಶಿ ಮನೆಗೆ ಬಂದು ಹೋಗುತ್ತಿದ್ದೇನೆ !

Date:

ಬೆಂಗಳೂರು: ಸ್ವಲ್ಪ ಜನ ಮಾಧ್ಯಮದ ಕಣ್ಣು ತಪ್ಪಿಸಿ ಡಿ.ಕೆ.ಶಿವಕುಮಾರ್ ಮನೆಗೆ ಹೋಗುತ್ತಾರೆ ಎಂದು ಯಶವಂತಪುರದ ಬಿಜೆಪಿ ಶಾಸಕ ಎಸ್. ಟಿ ಸೋಮಶೇಖರ್ ಹೇಳಿದರು. ಸದಾಶಿವನಗರದ ಡಿಕೆಶಿ ನಿವಾಸದ ಬಳಿ ಮಾತನಾಡಿದ ಅವರು, ಹೊಸ ವರ್ಷದ ಶುಭಾಶಯ ಹೇಳಲು ಬಂದಿದ್ದೆ. ನಿಮ್ಮ ನೇತೃತ್ವದಲ್ಲಿ ಬೆಂಗಳೂರು ಅಭಿವೃದ್ದಿ ಆಗಲಿ ಅಂತ ಹೇಳಿದೆ ಎಂದರು.
ನಮ್ಮ ಕ್ಷೇತ್ರದ ಬಗ್ಗೆ ಒಂದು ಮನವಿ ಇತ್ತು ಹಾಗಾಗಿ ಬಂದಿದ್ದೆ. ಕೆಲ ಬಿಜೆಪಿ ಶಾಸಕರು ರಾತ್ರಿ ಬರುತ್ತಾರೆ. ಮತ್ತೊಂದಿಷ್ಟು ಜನ ಮಾಧ್ಯಮದ ಕಣ್ಣು ತಪ್ಪಿಸಿ ಹೋಗುತ್ತಾರೆ. ನಾನು ರಾಜರೋಷವಾಗಿ ಬಂದು ಹೋಗುತ್ತಿದ್ದೇನೆ. ಕೆಲವರ ಹಾಗೆ ಕತ್ತಲಲ್ಲಿ ಬಂದು ಹೋಗಲ್ಲ. ನಾನಿದ್ದಾಗಲೂ ಸಾಕಷ್ಟು ಜನ ಬರುತ್ತಿದ್ದರು. ಆದರೆ ನೀವು ಅವರನ್ನು ಗಮನಿಸುವುದಿಲ್ಲ, ಯಶವಂತಪುರ ಶಾಸಕರನ್ನು ಮಾತ್ರ ಗಮನಿಸುತ್ತೀರಿ ಎಂದು ಪ್ರತಿಕ್ರಿಯಿಸಿದರು.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...