No menu items!
24.7 C
Munich
Saturday, May 2, 2026

ನಾನು ರಾಜೀನಾಮೆ ನೀಡಲು ಕೂಡ ಸಿದ್ದನಾಗಿದ್ದೇನೆ !?

Must read

ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕಿದ ವಚನಾನಂದ ಸ್ವಾಮೀಜಿ ಅವರಿಗೆ ಬೆದರಿಕೆ ಹಾಕಬೇಡಿ ತಾವು ರಾಜೀನಾಮೆ ನೀಡಲು ಕೂಡ ಸಿದ್ಧವಾಗಿರುವುದಾಗಿ ಯಡಿಯೂರಪ್ಪ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.

ಇಂತಹ ಹೇಳಿಕೆ ನೀಡುವ ಮೂಲಕ ಯಡಿಯೂರಪ್ಪ ತಾವು ಕುರ್ಚಿಗೆ ಅಂಟಿಕೊಂಡು ಕುಳಿತಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಇನ್ನು ಧಾರ್ಮಿಕ ಮುಖಂಡರು ಜಾತಿ ಹೆಸರಲ್ಲಿ ಬೆದರಿಕೆ ಹಾಕದಂತೆ ಹೇಳಿದ್ದಾರೆ. ಇದೇ ವೇಳೆ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವವರಿಗೆ ಸಂದೇಶ ನೀಡಿದ್ದಾರೆ. ರಾಜೀನಾಮೆಗೆ ಸಿದ್ಧ ಎಂದು ಹೇಳುವ ಮೂಲಕ ಸಂಪುಟ ವಿಸ್ತರಣೆಗೆ ತಡೆ ನೀಡಿರುವ ಮತ್ತು ಭೇಟಿಗೆ ಅವಕಾಶ ನೀಡದ ಪಕ್ಷದ ವರಿಷ್ಠರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article