ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ: ಡಾ.ಜಿ ಪರಮೇಶ್ವರ್

0
236

ಬೆಂಗಳೂರು: 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆ ಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ.
ಅವರಿಗೆ ಮಾತ್ರ ಎಲ್ಲ ಗೊತ್ತಿರೋದು. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋಕೆ ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು. ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.