ನಾನು ಸೇಫ್ ಅಂತ ಶಿವಣ್ಣ ಟ್ವೀಟ್ ಮಾಡಿದ್ದೇಕೆ..? ಇಂದು ರಾತ್ರಿ ಅವರು ಎಫ್​ಬಿ ಲೈವ್ ಬರ್ತಿರೋದು ಯಾಕೆ?

Date:

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್​ ಕುಮಾರ್ ‘ರುಸ್ತುಂ’ಯಶಸ್ಸಿನ ಖುಷಿಯಲ್ಲಿದ್ದಾರೆ. ಈ ನಡುವೆ ಅವರೀಗ ಲಂಡನ್​ನಲ್ಲಿದ್ದಾರೆ. ಕಾರಣ ಬಲ ಭುಜದ ಶಸ್ತ್ರ ಚಿಕಿತ್ಸೆಗೆ ಅವರು ಒಳಗಾಗಿದ್ದಾರೆ. ಆದ್ದರಿಂದ ಅಲ್ಲೇ ತಂಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಶಿವಣ್ಣ ಅಷ್ಟೊಂದು ಆ್ಯಕ್ಟೀವ್ ಆಗಿ ಟೈಮ್ ಸ್ಪೆಂಡ್ ಮಾಡೋರಲ್ಲ. ಆದರೆ. ಇಂದು ನಾನು ಸೇಫ್ ಎಂದು ಟ್ವೀಟ್ ಮಾಡಿದ್ದಾರೆ.
ಹೌದು ಜುಲೈ 12, ಅಂದರೆ ನಾಳೆ ಶಿವಣ್ಣನ ಜನ್ಮದಿನ. ಪ್ರತಿ ವರ್ಷ ಅಭಿಮಾನಿಗಳ ಜೊತೆ ಶಿವಣ್ಣ ಬರ್ತ್​ಡೇ ಸೆಲೆಬ್ರೇಟ್ ಮಾಡ್ತಿದ್ರು. ಆದರೆ ಈ ಬಾರಿ ಇಂಗ್ಲೆಂಡ್​ನಲ್ಲಿ ಇರುವುದರಿಂದ ಅವರು ತನ್ನ ಅಭಿಮಾನಿಗಳ ಜೊತೆ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಫೇಸ್​ಬುಕ್​ ಲೈವ್ ಮೂಲಕ ಅಭಿಮಾನಿಗಳ ಮುಂದೆ ಬರುವ ಮನಸ್ಸು ಮಾಡಿದ್ದಾರೆ.
ತಮ್ಮದೊಂದು ಫೋಟೋ ಹಾಕಿ ಶಿವಣ್ಣ, ”ನಿಮ್ಮೆಲರ ಪ್ರೀತಿ ಹಾರೈಕೆ ಆಪರೇಷನ್ successful and ನಿಮ್ಮ ಶಿವಣ್ಣ safe.ನಾನಿನ್ನು ಲಂಡನ್ನಲ್ಲೆ ಇರುವ ಕಾರಣ ಈ ಹುಟ್ಟುಹಬಕ್ಕೆ ನಿಮ್ಮೆಲ್ಲರನ್ನು ತುಂಬಾ ಮಿಸ್ ಮಾಡಿಕೊಳ್ಳುವೆ. ಆದಷ್ಟು ಬೇಗ ವಾಪಸ್ ಬರುವೆ, ಹಾಗೆ ಇಂದು ಮಧ್ಯರಾತ್ರಿ 12ಕ್ಕೆ ನನ್ನ official facebook pageನಲ್ಲಿ LIVE ಬರುವೆ ” ಎಂದು ಟ್ವೀಟ್ ಮಾಡಿದ್ದಾರೆ. ಇದು ಶಿವಣ್ಣನ ಮೊದಲ ಟ್ವೀಟ್ ಕೂಡ ಹೌದು..!

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...