ನಾಮಪತ್ರ ವಾಪಸ್ ಪಡೆದ ಮುದ್ದಹನುಮೇಗೌಡ, ನಿರಾಳರಾದ್ರು ದೇವೇಗೌಡ್ರು..!

Date:

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಮುದ್ದಹನುಮೇಗೌಡ ಇಂದು ತಮ್ಮ ನಾಮಪತ್ರ ವಾಪಸ್​ ಪಡೆದಿದ್ದಾರೆ. ಕಾಂಗ್ರೆಸ್​ ನಾಯಕರ ಮನವೊಲಿಕೆ ಬೆನ್ನಲ್ಲೇ ಅವರು ನಾಮಪತ್ರ ಹಿಂಪಡೆದಿದ್ದಾರೆ. ಈ ಮೂಲಕ ದೋಸ್ತಿಪಕ್ಷಗಳ ಸರ್ವಸಮ್ಮತ ಅಭ್ಯರ್ಥಿಯಾಗಿ ಸ್ಪರ್ಧಿಸಿರೋ ಜೆಡಿಎಸ್​​ ವರಿಷ್ಠ ಹೆಚ್.ಡಿ ದೇವೇಗೌಡರ ಹಾದಿ ಸುಗಮವಾಗಿದ್ದು, ಹೆಚ್​ಡಿಡಿ ನಿರಾಳರಾಗಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ವಿರುದ್ಧ ಸೆಡ್ಡು ಹೊಡೆದು, ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ಮುದ್ದಹನುಮೇಗೌಡ ಹಾಗೂ ಕೆ.ಎನ್ ರಾಜಣ್ಣ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನೆಲೆ ಕೈ ನಾಯಕರು ಗೊಂದಲಕ್ಕೆ ಸಿಲುಕಿದ್ದರು.

ಇನ್ನು ನಾಮಪತ್ರ ವಾಪಸ್​ ಪಡೆಯಬೇಕೋ ಬೇಡವೋ ಎಂಬ ಬಗ್ಗೆ ಇಂದು ಕಾಂಗ್ರೆಸ್​ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಮುದ್ದಹನುಮೇಗೌಡ ಸಭೆ ನಡೆಸಿದ್ದರು.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...