ನಾವು ಟಿವಿಯವರಿಗೆ ಆಹಾರ ಆಗೋ ಬದಲು ಸುಮ್ಮನಿದ್ದರೆ ಒಳ್ಳೆಯದು !

Date:

ಹುಬ್ಬಳ್ಳಿ: ನಾವು ಟಿವಿಯವರಿಗೆ ಆಹಾರ ಆಗೋ ಬದಲು ಸುಮ್ಮನಿದ್ದರೆ ಒಳ್ಳೆಯದು. ಸದ್ಯಕ್ಕೆ ಯಾವುದೇ ಗೊಂದಲಗಳಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸ್ವಾಮೀಜಿ ತಮ್ಮ ಸಂತೋಷಕ್ಕೆ ಹೇಳಿದ್ದಾರೆ. ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆಗೋ ಕಾಲ ಬಂದಾಗ ಆಗುತ್ತದೆ. ಪಕ್ಷ ನಿರ್ಧರಿಸುತ್ತದೆ. ಪಕ್ಷ ಅಧಿಕಾರಕ್ಕೆ ಬರಲು ವರಿಷ್ಠರು ಸಹಾಯ ಮಾಡಿದ್ದಾರೆ.
ಕಾರ್ಯಕರ್ತರು ಕೆಲಸ ಮಾಡಿದ್ದಾರೆ. ಅವರ ಉದ್ದೇಶ ಒಳ್ಳೆ ಆಡಳಿತ ಕೊಡಬೇಕು ಅನ್ನೋದು. ಸ್ವಾಮೀಜಿಗಳು ಅವರ ಅಭಿಪ್ರಾಯ ಹೇಳಿದ್ದಾರೆ. ನಮಲ್ಲಿ ಅಂತಹ ಗೊಂದಲ ಇಲ್ಲ. ಪಕ್ಷದ ನಾಯಕರು, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕುಳಿತು ತೀರ್ಮಾನ ಮಾಡುತ್ತಾರೆ. ನಾವು ಟಿವಿಯವರಿಗೆ ಆಹಾರ ಆಗೋ ಬದಲು ಸುಮ್ಮನಿದ್ದರೆ ಒಳ್ಳೆಯದು. ಸದ್ಯಕ್ಕೆ ಯಾವುದೇ ಗೊಂದಲಗಳಿಲ್ಲ ಎಂದರು.
ಇನ್ನೂ ಚನ್ನಪಟ್ಟಣದಲ್ಲಿಡಿ.ಕೆ ಶಿವಕುಮಾರ್ ಸ್ಪರ್ಧೆ ಮಾಡೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನಗೂ ರಿಪೋರ್ಟ್ ಕೇಳಿದ್ದಾರೆ. ನಾನಿನ್ನೂ ಸಭೆ ನಡೆಸಿಲ್ಲ. ಮೀಟಿಂಗ್ ಮಾಡಿ ವರದಿ ಕೊಡುತ್ತೇನೆ. ಆ ಮೇಲೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತೀರ್ಮಾನ ಮಾಡುತ್ತಾರೆ. ಸೋತಿದ್ದೇವೆ, ಗೆಲ್ಲಬೇಕು ಅನ್ನೋದಿದೆ. ದೊಡ್ಡವರ ಸೀಟ್ ಅದು, ಅವರು ಕೇಂದ್ರದಲ್ಲಿ ಮಂತ್ರಿ ಆಗಿದ್ದಾರೆ. ನಾವು ಅವರ ವಿರುದ್ಧ ತೊಡೆ ತಟ್ಟೋಕೆ ಆಗುತ್ತಾ?. ಜನರ ಮಧ್ಯೆ ಹೋಗುತ್ತೇವೆ. ಏನಾಗುತ್ತದೆಯೆಂಬುದನ್ನು ನೋಡೋಣ ಎಂದರು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...