ನಾವು ಯಾವುದೇ ಅಭಿವೃದ್ಧಿ ಕೆಲಸ ತಡೆ ಮಾಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Date:

ಧಾರವಾಡ: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ. ಯೋಜನೆ ಯಶಸ್ಸಿಗೆ ಹಣಕಾಶಿನ ತೊಂದರೆ ಇಲ್ಲ. ತಾಂತ್ರಿಕ ಸಮಸ್ಯೆ ಇದೆ ಅದನ್ನು ಈಗಾಗಲೇ ಫೈಂಡೌಟ್ ಮಾಡಲಾಗಿದೆ. ಆದಷ್ಟು ಬೇಗ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣವನ್ನು ತೆಗೆದು ಇಟ್ಟಿದೆ. ನಾವು ಯಾವುದೇ ಅಭಿವೃದ್ಧಿ ಕೆಲಸ ತಡೆ ಮಾಡಿಲ್ಲ. ಗೃಹ ಲಕ್ಷ್ಮೀ ಯೋಜನೆಗೆ ಹಣಕಾಸಿನ ತೊಂದರೆ ಇದೆ ಅನ್ನುವುದು ಸುಳ್ಳು. ಗೃಹ ಲಕ್ಷ್ಮೀಯಲ್ಲಿ ಈಗಾಗಲೇ 1 ಕೋಟಿ 9 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿದೆ. ಇನ್ನೂ 5 ರಿಂದ 6 ಲಕ್ಷ ಜನ ಉಳಿದುಕೊಂಡಿದ್ದಾರೆ. ಅವರದ್ದು ಸಹ ಇನ್ನೂ 15 ದಿನಗಳಲ್ಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...