No menu items!
14.8 C
Munich
Tuesday, June 16, 2026

ನಾವು ಯಾವುದೇ ಅಭಿವೃದ್ಧಿ ಕೆಲಸ ತಡೆ ಮಾಡಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Must read

ಧಾರವಾಡ: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಗೆ ಯಾವುದೇ ಸಮಸ್ಯೆಯಿಲ್ಲ. ಯೋಜನೆ ಯಶಸ್ಸಿಗೆ ಹಣಕಾಶಿನ ತೊಂದರೆ ಇಲ್ಲ. ತಾಂತ್ರಿಕ ಸಮಸ್ಯೆ ಇದೆ ಅದನ್ನು ಈಗಾಗಲೇ ಫೈಂಡೌಟ್ ಮಾಡಲಾಗಿದೆ. ಆದಷ್ಟು ಬೇಗ ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣವನ್ನು ತೆಗೆದು ಇಟ್ಟಿದೆ. ನಾವು ಯಾವುದೇ ಅಭಿವೃದ್ಧಿ ಕೆಲಸ ತಡೆ ಮಾಡಿಲ್ಲ. ಗೃಹ ಲಕ್ಷ್ಮೀ ಯೋಜನೆಗೆ ಹಣಕಾಸಿನ ತೊಂದರೆ ಇದೆ ಅನ್ನುವುದು ಸುಳ್ಳು. ಗೃಹ ಲಕ್ಷ್ಮೀಯಲ್ಲಿ ಈಗಾಗಲೇ 1 ಕೋಟಿ 9 ಲಕ್ಷ ಫಲಾನುಭವಿಗಳಿಗೆ ಹಣ ಬಿಡುಗಡೆ ಆಗಿದೆ. ಇನ್ನೂ 5 ರಿಂದ 6 ಲಕ್ಷ ಜನ ಉಳಿದುಕೊಂಡಿದ್ದಾರೆ. ಅವರದ್ದು ಸಹ ಇನ್ನೂ 15 ದಿನಗಳಲ್ಲಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article