ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ನಿಖಿಲ್ ಕಂಟೆಸ್ಟ್ ಮಾಡುವ ಸುದ್ದಿ ಪಕ್ಕಾ ಆಗುತ್ತಿದ್ದಂತೆ ಅವರ ಚೊಚ್ಚಲ ಸಿನಿಮಾ ಜಾಗ್ವಾರ್ ನ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದ ನಿಖಿಲ್ ಎಲ್ಲಿದ್ದಿಯಪ್ಪಾ ಎನ್ನುವ ಮಾತು ಟ್ರೋಲ್ ಆಗಲಾರಂಭಿಸಿದೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಸದ್ದು ಮಾಡುತ್ತಿರುವ ಮಾತೆಂದ್ರೆ ಅದು ನಿಖಿಲ್ ಎಲ್ಲಿದ್ದಿಯಪ್ಪಾ.
ಈ ಬಗ್ಗೆ ಕುಮಾರಸ್ವಾಮಿ ಇಂದು ಮಾತನಾಡಿದ್ದಾರೆ. ನಿಖಿಲ್ ಎಲ್ಲಿದ್ದಿಯಪ್ಪಾ ಎಂದು ಕೇಳಿದ್ರೆ ಅವನು ನಮ್ಮ ಹೃದಯದಲ್ಲಿದ್ದಾನೆ ಎಂದು ಹೇಳಿ. ಆ ಟ್ರೋಲ್ ಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಟಾಂಗ್ ನೀಡಿದ್ದಾರೆ.