ನಿಖಿಲ್ ಕುಮಾರಸ್ವಾಮಿಗೆ ಇದೆಂಥಾ ದೊಡ್ಡ ಶಾಕ್ – ಸಿಎಂ ಪುತ್ರ ಚುನಾವಣಾ ಕಣದಿಂದಲೇ ಹಿಂದೆ ಸರಿಯ ಬೇಕಾಗುತ್ತಾ?

Date:

ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಸುಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ದೋಸ್ತಿ ಅಭ್ಯರ್ಥಿ. ಅವರ ಎದುರು ಇರುವುದು ಮಂಡ್ಯದ ಗೌಡ್ತಿ ಸುಮಲತಾ ಅಂಬರೀಶ್. ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್ ಮತ್ತು ನಿಖಿಲ್ ನಡುವಿನ ಬಿಗ್ ಫೈಟ್ ಮತದಾನಕ್ಕೂ ಮೊದಲೇ ಕೊನೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಿಖಿಲ್ ಕುಮಾರಸ್ವಾಮಿ ಅವರು ಕಣದಿಂದ ಅನಿವಾರ್ಯವಾಗಿ ಹಿಂದೆ ಸರಿದರೂ ಅಚ್ಚರಿ ಇಲ್ಲ. ಅವರಾಗಿಯೇ ಹಿಂದೆ ಸರಿಯುವ ಮನಸ್ಸು ಮಾಡಿಲ್ಲ. ಅವರು ನಾಮಪತ್ರ ಸಲ್ಲಿಕೆ ವೇಳೆ ಮಾಡಿರುವ ಯಡವಟ್ಟು ಅವರನ್ನು ಕಣದಿಂದ ವಾಪಸ್ಸು ದಬ್ಬಬಹುದು.
ನಿಖಿಲ್ ಅವರು ಹಳೆಯ ಮಾದರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಅವಧಿ ಮುಗಿದ ಮೇಲೆ ಜಿಲ್ಲಾಧಿಕಾರಿ ಅವರು ನಿಖಿಲ್ ಅವರನ್ನು ಕರೆಸಿ, ಹೊಸ ಮಾದರಿಯಲ್ಲಿ ನಾಮಪತ್ರ ಸಲ್ಲಿಸಬೇಕು ಎಂದು ಹೊಸ ಮಾದರಿಯನ್ನು ನೀಡಿದರು. ನಿಖಿಲ್ ಅವಧಿ ಮುಗಿದ ಮೇಲೆ ಹೊಸ ಮಾದರಿಯಲ್ಲಿ ನಾಮಪತ್ರ ನೀಡಿದರು.
ಕಾನೂಬಾಹಿರವಾಗಿ ನಾಮಪತ್ರವನ್ನು ಅವಧಿ ಮುಗಿದ ಮೇಲೆ ಸಲ್ಲಿಸಲಾಗಿದೆ ಎಂದು ಸುಮಲತಾ ಬೆಂಬಲಿಗರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಇದರಿಂದ ನಿಖಿಲ್ ನಾಮಪತ್ರ ಅಸಿಂಧು ಆದರೂ ಆಗಬಹುದು. ಜಿಲ್ಲಾಧಿಕಾರಿಗಳ ವಿರುದ್ಧವೂ ಕ್ರಮ ಜರುಗುವ ಸಾಧ್ಯತೆ ಸಹ ಇದೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...