No menu items!
14.8 C
Munich
Thursday, April 30, 2026

ನಿಖಿಲ್ ಕುಮಾರಸ್ವಾಮಿ ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಭೇಟಿ ಮಾಡಿದ್ದಾರೆ!? ಕಾರಣ ಗೊತ್ತಾ?

Must read

ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿಯವರನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

ಬಾರಿ ಬಹುಮತದೊಂದಿಗೆ, ಆಂಧ್ರದಲ್ಲಿ ಜಯ ಸಾಧಿಸಿ, ಗದ್ದುಗೆ ಹಿಡಿದ ವೈಎಸ್ ಜಗನ್ ಮೋಹನ್ ರೆಡ್ಡಿಯವರು ಸಿಎಂ ಆದ ನಂತ್ರ, ಮೊದಲ ಬಾರಿಗೆ ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿದ್ದಾರೆ.

ಈ ಮೂಲಕ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ, ಆಡಳಿತ ನಡೆಸುತ್ತಿರುವ ಜಗನ್ ಮೋಹನ್ ರೆಡ್ಡಿಯವರಿಗೆ ಅಭಿನಂದಿಸಿ, ಶುಭಾಷಯ ತಿಳಿಸಿದ್ದಾರೆ.

ಈ ವಿಚಾರವನ್ನು ನಿಖಿಲ್ ಕುಮಾರಸ್ವಾಮಿ ಎಲ್ಲಿಯೂ ಹೇಳಿಕೊಂಡಿಲ್ಲವಾದರೂ, ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಯವರು, ನಿಖಿಲ್ ಕುಮಾರಸ್ವಾಮಿ ಭೇಟಿಯಾಗಿ ಅಭಿನಂದಿಸಿದ ಬಗ್ಗೆ ಟ್ವಿಟರ್ ನಲ್ಲಿ ಪೋಟೋ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿನಂದಿಸಿದ ನಿಖಿಲ್ ಕುಮಾರಸ್ವಾಮಿಯವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article