No menu items!
16.8 C
Munich
Friday, August 21, 2026

ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟ ಕೊಳ್ಳೇಗಾಲದ ಯೋಗಪಟು!

Must read

ಚಾಮರಾಜನಗರ:- ಚಾಮರಾಜನಗರದ ಕೊಳ್ಳೇಗಾಲದ ದಾಸನಪುರ ಬಳಿ ಹರಿಯುವ ಕಾವೇರಿ ನದಿಯಲ್ಲಿ ಯೋಗಪಟುವೊಬ್ಬರು ನೀರಿನಲ್ಲಿ ಯೋಗ ಮಾಡುತ್ತಲೇ ಪ್ರಾಣಬಿಟ್ಟಿರುವ ಘಟನೆ ಜರುಗಿದೆ.

ನಾಗರಾಜು (78) ಮೃತ ವ್ಯಕ್ತಿ. ನಾಗರಾಜು ತೀರ್ಥ ಸ್ನಾನ ಮಾಡಲೆಂದು ನದಿಗೆ ಇಳಿದಿದ್ದರು. ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ತೇಲುವ ಸ್ಥಿತಿಯಲ್ಲೇ ಇದ್ದರು. ಜೊತೆಗೆ ಬಂದಿದ್ದವರು ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಯೋಗ ಮಾಡುತ್ತಲೇ ಕೊನೆಯುಸಿರೆಳೆದಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.

- Advertisement -spot_img

More articles

- Advertisement -spot_img

Latest article