ರಾಜ್ಯ ಬಿಜೆಪಿ ನಾಯಕರು ಸರ್ಕಾರ, ಸಂಪುಟ ರಚನೆ ಬಗ್ಗೆ ಉತ್ಸುಕರಾಗಿದ್ದರೂ, ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದು ಇಂದು ಸಂಜೆ 6 ಕ್ಕೆ ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ .
ಬಿಜೆಪಿಯ ಹಿರಿಯ ಸದಸ್ಯರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗುವುದು. ಬಿಜೆಪಿ ಸೇರಲಿರುವ ಹೆಚ್. ವಿಶ್ವನಾಥ್ ಅವರಿಗೆ ಪ್ರಾಥಮಿಕ ಶಿಕ್ಷಣ ಖಾತೆ ನೀಡಲಿದ್ದು, ಕೆ.ಜಿ. ಬೋಪಯ್ಯ ಅವರಿಗೆ ಸ್ಪೀಕರ್ ಆಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.