ನೆರೆ ಪೀಡಿತರ ನೆರವಿಗೆ ಬಂದ ಐಕಾನ್ ಸ್ಟಾರ್ ಅಲ್ಲು ಅರ್ಜುನ್ !

Date:

ಭಾರಿ ಮಳೆಯಿಂದ ನಲುಗಿದ ತೆಲುಗು ರಾಜ್ಯಗಳ ವಿವಿಧ ಪ್ರದೇದ ಜನರ ನೆರವಿಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂದಿದ್ದು, ಎರಡೂ ರಾಜ್ಯಗಳ ನೆರೆ ಪೀಡಿತರಿಗಾಗಿ 1 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ.
ಜನ ಸಂಕಷ್ಟದಲ್ಲಿದ್ದಾಗ ಈ ಹಿಂದೆಯೂ ಅಲ್ಲು ಅರ್ಜುನ್ ಜನರ ಸಹಾಯಕ್ಕೆ ನಿಂತಿದ್ದರು. ಈಗ ಅದು ಮತ್ತೆ ಮುಂದುವರೆದಿದೆ. ತಾನು ಜನರನ್ನು ರಂಜಿಸುವುದು ಮಾತ್ರವಲ್ಲ ಜನರ ಸಂಕಷ್ಟಕ್ಕೂ ಮಿಡಿಯುತ್ತಾರೆ ಎಂಬುದನ್ನು ಮತ್ತೊಮ್ಮೆ ಈ ಮೂಲಕ ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ.
ʼಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿನ ಕೆಲ ಪ್ರದೇಶದ ಜನ ಜನ ಮಳೆಯಿಂದಾಗಿ ಮನೆ, ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವುದು ನನ್ನ ಮನಸ್ಸಿಗೆ ತೀರ್ವ ನೋವುಂಟು ಮಾಡಿದೆ. ಅವರ ಕಷ್ಟಕ್ಕೆ ನನ್ನ ಕಡೆಯಿಂದ ತಲಾ 1 ಕೋಟಿ ರೂಪಾಯಿಗಳನ್ನು ಮುಖ್ಯ ಮಂತ್ರಿ ಪರಿಹಾರ ನಿಧಿಗೆ ನೀಡುತ್ತಿದ್ದೆ. ಆದಷ್ಟು ಬೇಗ ಎಲ್ಲರೂ ಸಂಕಷ್ಟದಿಂದ ಪಾರಾಗುವಂತಾಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆʼಎಂದು ಅಲ್ಲು ಅರ್ಜುನ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...