ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

Date:

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಇಂದು ಪಂಚಭೂತಗಳಲ್ಲಿ ಲೀನರಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಭೈರಪ್ಪ ಅವರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ಹೊದಿಸಿ ಗೌರವ ಸಮರ್ಪಿಸಲಾಯಿತು. ಬಳಿಕ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಪೊಲೀಸರಿಂದ ಗೌರವ ಸಲ್ಲಿಕೆಯಾಯಿತು.

ಚಂದ್ರಶೇಖರ ಶಾಸ್ತ್ರೀ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿತು. ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಪುತ್ರರಾದ ರವಿಶಂಕರ್, ಉದಯ್ ಶಂಕರ್ ಮತ್ತು ವಿಲ್‌ನಲ್ಲಿ ಉಲ್ಲೇಖಿಸಲ್ಪಟ್ಟ ಸಹನಾ ವಿಜಯ್ ಕುಮಾರ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯ ಸಂಸ್ಕಾರದ ಬಳಿಕ ಬಂದೂಕು ಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಬಳಿಕ ತ್ರಿವರ್ಣ ಧ್ವಜವನ್ನು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ಭೈರಪ್ಪ ಅವರ ಪುತ್ರರಿಗೆ ಹಸ್ತಾಂತರ ಮಾಡಿದರು.

Share post:

Subscribe

spot_imgspot_img

Popular

More like this
Related

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...