ಪಂಚಮಸಾಲಿ ಹೋರಾಟದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ: ಐವರ ವಿರುದ್ಧ FIR ದಾಖಲು

Date:

ಪಂಚಮಸಾಲಿ ಹೋರಾಟದಲ್ಲಿ ಲಾಠಿ ಚಾರ್ಜ್, ಕಲ್ಲು ತೂರಾಟ: ಐವರ ವಿರುದ್ಧ FIR ದಾಖಲು

ಬೆಳಗಾವಿ: ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದುಕೊಂಡಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಕಲ್ಲು ಎಸೆದ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲಾಗಿದೆ.
ಆರೋಪಿತರು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ. ಅಲ್ಲದೇ ಕೊಲೆ ಮಾಡಲು ಯತ್ನಸಿದ್ದಾರೆ. ಹಾಗೂ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಬಿಎನ್ಎಸ್ ಕಲಂ 115(2), 109(1), 118(2), 117(2), 352, 351(2), 132, 121, 223, 324,189, 189(3), 191(2), 190 ಅಡಿ ಕೇಸ್ ಪಿಐ ಆರ್.ಆರ್ ಪಾಟೀಲ್ ಅವರು ಕೇಸ್ ದಾಖಲಿಸಿಕೊಂಡಿದ್ದಾರೆ.
ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...