No menu items!
27.4 C
Munich
Thursday, August 13, 2026

ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ RCB ತಂಡಕ್ಕೆ ಅಭಿನಂದನೆಗಳ ಮಹಾಪೂರ !

Must read

ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ RCB ತಂಡಕ್ಕೆ ಅಭಿನಂದನೆಗಳ ಮಹಾಪೂರ !

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳ ಪ್ರಾರ್ಥನೆ ಕೊನೆಗೂ ಈಡೇರಿದೆ. ಒಂದು ಬಾರಿಯಾದರೂ ಕಪ್ ಗೆಲ್ಲಬೇಕೆಂಬ 18 ವರ್ಷಗಳ ಕನಸು ಈ ಬಾರಿ ನನಸಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ʻಈ ಸಲ ಕಪ್ ನಮ್ದೇʼ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ ಗಿಫ್ಟ್ ನೀಡಿದೆ.
ಇನ್ನೂ ಈ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ “ Rrrrrrrrr…. Cccccccc…. Bbbbbbbbb….ಇದು ಇತಿಹಾಸ ಸೃಷ್ಟಿಸಿದ ದಿನ.. ಆರ್ಸಿಬಿ ತಂಡಕ್ಕೆ ಅಭಿನಂದನೆಗಳು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
“ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್ಸಿಬಿಯ ಹುಡುಗರು ನನಸಾಗಿಸಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

- Advertisement -spot_img

More articles

- Advertisement -spot_img

Latest article