ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಹೆಚ್.ಡಿ. ರೇವಣ್ಣ ಬಿಡುಗಡೆ

Date:

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇಂದು ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರೇವಣ್ಣ ಅವರು ಜೈಲಿನಿಂದ ಹೊರ ಬಂದರು. ರೇವಣ್ಣ ಅವರು ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಮಾಧ್ಯಮಗಳತ್ತ ಕೈ ಮುಗಿದು ಮುಂದೆ ಸಾಗಿದರು. ರೇವಣ್ಣ ಬರುವಿಕೆಗಾಗಿ ಅಭಿಮಾನಿಗಳು ಜೈಲಿನ ಹೊರಗೆ ಕಾಯುತ್ತಿದ್ದರು. ಹೀಗಾಗಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಒದಗಿಸಲಾಗಿತ್ತು.


ಆದರೂ ರೇವಣ್ಣ ಹೊರಗೆ ಬರ್ತಿದ್ದಂತೆ ಕಾರ್ಯಕರ್ತರು ಕಾರಿಗೆ ಅಡ್ಡ ಬಂದಿದ್ದಾರೆ. ಈ ವೇಳೆ ರೇವಣ್ಣ ಕಾರ್ ಮೂವ್ ಮಾಡಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಸಂತ್ರಸ್ತೆಯ ಕಿಡ್ನಾಪ್‌ ಆರೋಪ ಎದುರಿಸುತ್ತಿದ್ದ ರೇವಣ್ಣ ಅವರು 6 ದಿನಗಳ ಹಿಂದೆ ಜೈಲು ಸೇರಿದ್ದರು. ನಿನ್ನೆ ಇಡೀ ದಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಬಳಿಕ ಸಂಜೆ ಕೆಲವೊಂದು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಲಾಗಿತ್ತು.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...