ಪರೀಕ್ಷೆ ಬರೆಯಬೇಕು ಅಂದ್ರೆ ತಾಳಿ ತೆಗೆಯಬೇಕು ಅಂತಾ ಹೇಳಿದ್ರು: ಅಭ್ಯರ್ಥಿ ರಾಜಮ್ಮ

Date:

ಕಲಬುರಗಿ: ಕಲಬುರಗಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಗ್ರೂಪ್ ಸಿ ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಅಕ್ರಮ ತಡೆಯಲು ತಾಳಿ, ಕಾಲುಂಗುರ ಹಾಗೂ ಕಿವಿಯಲ್ಲಿದ್ದ ಓಲೆಗಳನ್ನು ಅಧಿಕಾರಿಗಳು ತೆಗೆಸಿದ್ದರು. ಈ ವೇಳೆ ತಾಳಿ ತೆಗೆಯಲು ಹಿಂದೇಟು ಹಾಕಿದ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅಧಿಕಾರಿಗಳು ಅವಕಾಶ ನಿರಾಕರಿಸಿದ್ದರು. ಅಲ್ಲದೇ ಕಿವಿ ಓಲೆ ತೆಗೆಯಲು ಬರದಿದ್ದಾಗ ಚಿನ್ನದಂಗಡಿಗೆ ಹೋಗಿ ಮಹಿಳೆಯರು ತೆಗೆಸಿಕೊಂಡು ಬಂದಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಅಭ್ಯರ್ಥಿ ರಾಜಮ್ಮ ನೋವಿನ ಮಾತುಗಳಾನ್ನಾಡಿದ್ದಾರೆ.
ಹಿಂದು ಸಂಪ್ರದಾಯದಲ್ಲಿ ತಾಳಿ ಕಾಲುಂಗರಕ್ಕೆ ತನ್ನದೇ ಆದ ಸಂಸ್ಕ್ರತಿಯಿದೆ. ಗಂಡ ಸತ್ತಾಗ ಅಥವಾ ಹೆರಿಗೆ ಸಮಯದಲ್ಲಿ ಮಾತ್ರ ತಾಳಿ ತೆಗೆಯುತ್ತೆವೆ. ಇಷ್ಟು ಹೇಳಿದ್ರು ಪರೀಕ್ಷಾ ಸಿಬ್ಬಂದಿ ನಮ್ಮ ಮಾತಿಗೆ ಬೆಲೆ ಕೊಡಲಿಲ್ಲ, ಪರೀಕ್ಷೆ ಬರೆಯಬೇಕು ಅಂದ್ರೆ ತಾಳಿ ತೆಗೆಯಬೇಕು ಅಂತಾ ಹೇಳಿದ್ರು. ಹೀಗಾಗಿ ಪರೀಕ್ಷೆ ದೃಷ್ಟಿಯಿಂದ ಸಹೋದರನ ಕೈಯಲ್ಲಿ ತಾಳಿ ಕೊಟ್ಟು ಹೋದ್ವಿ, ಪರೀಕ್ಷೆ ಬರೆದ ಬಳಿಕ ಮತ್ತೆ ಬಂದು ತಾಳಿ ಧರಿಸಿದಿವಿ, ಈ ವಿಷ್ಯ ನಮ್ಮ ಮನಸ್ಸಿಗೆ ಆಘಾತ ತಂದಿದೆ ಸರ್ಕಾರ ಹೀಗೆ ಮಾಡಬಾರದಿತ್ತು ಎಂದು ಮಾಧ್ಯಮಗಳಿಗೆ ಪರೀಕ್ಷಾ ಅಭ್ಯರ್ಥಿ ರಾಜಮ್ಮ ನೋವಿನ ಮಾತುಗಳಾನ್ನಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ!

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಇಳಿಕೆ: ಯಥಾಸ್ಥಿತಿಯಲ್ಲಿ ಗೃಹಬಳಕೆ! ನವದೆಹಲಿ:- ದೇಶದಲ್ಲಿ ಪ್ರತಿ...

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

ಇಂಗ್ಲೀಷ್, ಹಿಂದಿ ಭಾಷೆಗಳ ದಾಳಿಯಿಂದ ಕನ್ನಡ‌‌ ಕಾಪಾಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಇಡೀ...

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು

ಆಂಧ್ರದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: ದೇವರ ದರ್ಶನಕ್ಕೆ ಬಂದ 9 ಭಕ್ತಾದಿಗಳ ಸಾವು ಆಂಧ್ರಪ್ರದೇಶದ...

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಒಣ ಹವೆ! ಆದ್ರೆ ಬೆಂಗಳೂರಿನಲ್ಲಿ ಮೋಡ ಕವಿದ...