ಪರೀಕ್ಷೆ ಬರೆಯಬೇಕು ಅಂದ್ರೆ ತಾಳಿ ತೆಗೆಯಬೇಕು ಅಂತಾ ಹೇಳಿದ್ರು: ಅಭ್ಯರ್ಥಿ ರಾಜಮ್ಮ

Date:

ಕಲಬುರಗಿ: ಕಲಬುರಗಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ, ಗ್ರೂಪ್ ಸಿ ಹುದ್ದೆಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಅಕ್ರಮ ತಡೆಯಲು ತಾಳಿ, ಕಾಲುಂಗುರ ಹಾಗೂ ಕಿವಿಯಲ್ಲಿದ್ದ ಓಲೆಗಳನ್ನು ಅಧಿಕಾರಿಗಳು ತೆಗೆಸಿದ್ದರು. ಈ ವೇಳೆ ತಾಳಿ ತೆಗೆಯಲು ಹಿಂದೇಟು ಹಾಕಿದ ಮಹಿಳೆಯರಿಗೆ ಪರೀಕ್ಷೆ ಬರೆಯಲು ಅಧಿಕಾರಿಗಳು ಅವಕಾಶ ನಿರಾಕರಿಸಿದ್ದರು. ಅಲ್ಲದೇ ಕಿವಿ ಓಲೆ ತೆಗೆಯಲು ಬರದಿದ್ದಾಗ ಚಿನ್ನದಂಗಡಿಗೆ ಹೋಗಿ ಮಹಿಳೆಯರು ತೆಗೆಸಿಕೊಂಡು ಬಂದಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಅಭ್ಯರ್ಥಿ ರಾಜಮ್ಮ ನೋವಿನ ಮಾತುಗಳಾನ್ನಾಡಿದ್ದಾರೆ.
ಹಿಂದು ಸಂಪ್ರದಾಯದಲ್ಲಿ ತಾಳಿ ಕಾಲುಂಗರಕ್ಕೆ ತನ್ನದೇ ಆದ ಸಂಸ್ಕ್ರತಿಯಿದೆ. ಗಂಡ ಸತ್ತಾಗ ಅಥವಾ ಹೆರಿಗೆ ಸಮಯದಲ್ಲಿ ಮಾತ್ರ ತಾಳಿ ತೆಗೆಯುತ್ತೆವೆ. ಇಷ್ಟು ಹೇಳಿದ್ರು ಪರೀಕ್ಷಾ ಸಿಬ್ಬಂದಿ ನಮ್ಮ ಮಾತಿಗೆ ಬೆಲೆ ಕೊಡಲಿಲ್ಲ, ಪರೀಕ್ಷೆ ಬರೆಯಬೇಕು ಅಂದ್ರೆ ತಾಳಿ ತೆಗೆಯಬೇಕು ಅಂತಾ ಹೇಳಿದ್ರು. ಹೀಗಾಗಿ ಪರೀಕ್ಷೆ ದೃಷ್ಟಿಯಿಂದ ಸಹೋದರನ ಕೈಯಲ್ಲಿ ತಾಳಿ ಕೊಟ್ಟು ಹೋದ್ವಿ, ಪರೀಕ್ಷೆ ಬರೆದ ಬಳಿಕ ಮತ್ತೆ ಬಂದು ತಾಳಿ ಧರಿಸಿದಿವಿ, ಈ ವಿಷ್ಯ ನಮ್ಮ ಮನಸ್ಸಿಗೆ ಆಘಾತ ತಂದಿದೆ ಸರ್ಕಾರ ಹೀಗೆ ಮಾಡಬಾರದಿತ್ತು ಎಂದು ಮಾಧ್ಯಮಗಳಿಗೆ ಪರೀಕ್ಷಾ ಅಭ್ಯರ್ಥಿ ರಾಜಮ್ಮ ನೋವಿನ ಮಾತುಗಳಾನ್ನಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್

ಶಿಕಾರಿಪುರ ಸೇರಿ ನಾಲ್ಕೈದು ಕಡೆ ಪಾದಯಾತ್ರೆಯಲ್ಲಿ ನಾನೇ ಭಾಗವಹಿಸುವೆ: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ ಶೋಕ

ಕಾಡಾನೆ ದಾಳಿ: ಸಕಲೇಶಪುರದಲ್ಲಿ ಮಹಿಳೆ ಸಾವು, ಸಚಿವ ಈಶ್ವರ ಖಂಡ್ರೆ ತೀವ್ರ...

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ

ಮೊದಲ ಪತ್ನಿಗೆ ವಂಚನೆ: ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಬಂಧನ ಬೆಂಗಳೂರು:...

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...