ಪವರ್​​ ಸ್ಟಾರ್​ಗೆ ದೂದ್​ ಪೇಡ ಸಾಥ್..!

Date:

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹಾಗೂ ಸಂತೋಷ್​ ಆನಂದ್​ ರಾಮ್ ಕಾಂಬಿನೇಷನ್​ನ ಬಹು ನಿರೀಕ್ಷಿತ ಕನ್ನಡ ಸಿನಿಮಾ ‘ಯುವ ರತ್ನ’. ಟೈಟಲ್​ ಲಾಂಚ್ ಆದಲ್ಲಿಂದಲೂ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟು ಹಾಕಿರುವ ಯುವರತ್ನ ಟೀಮ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ.
5ನೇ ಹಂತದ ಶೂಟಿಂಗ್​ನಲ್ಲಿರುವ ಚಿತ್ರತಂಡವನ್ನು ದಿನಕ್ಕೊಬ್ಬರಂತೆ ಸ್ಟಾರ್​ ಗಳು ಸೇರಿಕೊಳ್ಳುತ್ತಿದ್ದಾರೆ. ತೆಲುಗಿನ ಸ್ಟಾರ್ ಮ್ಯೂಸಿಕ್ ಕಂಪೋಸರ್ ಎಸ್​.ಎಸ್​ ತಮನ್ ಮೊನ್ನೆ ಮೊನ್ನೆಯಷ್ಟೇ ತಂಡ ಕೂಡಿ ಕೊಂಡಿದ್ದರು. ಈಗ ಸ್ಯಾಂಡಲ್​ವುಡ್​ನ ಮತ್ತೊಬ್ಬ ಸ್ಟಾರ್ ತಂಡವನ್ನು ಕೂಡಿ ಕೊಂಡಿದ್ದಾರೆ.
ಹೌದು, ಸ್ಯಾಂಡಲ್​ವುಡ್​ನ ದೂದ್ ಪೇಡ ಖ್ಯಾತಿಯ ನಟ ದಿಗಂತ್ ಅವರು ಯುವರತ್ನ ಪುನೀತ್ ರಾಜ್​ಕುಮಾರ್ ಅವರ ತಂಡವನ್ನು ಸೇರಿಕೊಂಡಿದ್ದಾರೆ. ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್ ಅವರು ಕಾಲೇಜು ವಿದ್ಯಾರ್ಥಿ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದು, ದಿಗಂತ್ ಪಾತ್ರ ಯಾವ್ದು ಅಂತ ಇನ್ನೂ ರಿವೀಲ್ ಆಗಿಲ್ಲ.
ಇನ್ನು ಚಿತ್ರತಂಡದಲ್ಲಿ ಸಾಯೇಷಾ ಸೈಗಲ್, ಟಗರು ಡಾಲಿ ಧನಂಜಯ್, ಕಾಕ್ರೋಚ್ ಸುಧೀಂದ್ರ ಮತ್ತಿತರರು ನಟಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ!

ಮಧುಮೇಹದಿಂದ ಹೃದಯ ಆರೋಗ್ಯದವರೆಗೂ ತೊಂಡೆಕಾಯಿ ರಾಮಬಾಣ! ತರಕಾರಿಗಳನ್ನು ಸೇವಿಸುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯೆಂದು...

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...