ಪಿಯು ತರಗತಿಗಳು ಬಂದ್!

Date:

ಬೆಂಗಳೂರು: ಕೊರೊನಾ ಎರಡನೇ ಅಲೆ ಹಿನ್ನೆಲೆ ಸರ್ಕಾರದಿಂದ ಕಠಿಣ ಮಾರ್ಗಸೂಚಿ ಜಾರಿ ಮಾಡಲಾಗಿದ್ದು, ಹೀಗಾಗಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಬಂದ್ ಮಾಡಿ ಪಿಯು ಬೋರ್ಡ್ ಆದೇಶ ಹೊರಡಿಸಿದೆ.

ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಪಿಯು ಬೋರ್ಡ್ ಸ್ಥಗಿತಗೊಳಿಸಿದೆ. ಪ್ರಶ್ನೆ ಪತ್ರಿಕೆಗಳನ್ನು ಅಭ್ಯಾಸ ಪತ್ರಿಕೆಗಳಾಗಿ ವಿದ್ಯಾರ್ಥಿಗಳಿಗೆ ನೀಡಲು ಸೂಚನೆ ನೀಡಲಾಗಿದೆ. ಆನ್‍ಲೈನ್ ಹಾಗೂ ಪ್ರೀ ರೆಕಾರ್ಡ್ ತರಗತಿಗಳನ್ನು ಮುಂದುವರೆಸಲು ತಿಳಿಸಲಾಗಿದೆ.

ಏಪ್ರಿಲ್ 28 ರಿಂದ ಮೇ 5 ರವರೆಗೆ ನಿಗದಿಯಾಗಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ. ಪರೀಕ್ಷೆ ವೇಳೆ ಶೇ.50ರಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಪ್ರಾಂಶುಪಾಲರು ಸೂಕ್ತ ವೇಳಾಪಟ್ಟಿ ತಯಾರಿಸುವಂತೆ ಪಿಯು ಬೋರ್ಡ್ ಆದೇಶದಲ್ಲಿ ತಿಳಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...