ಪುದೀನಾ ಎಲೆಗಳಿಂದ ಪಡೆಯಬಹುದಾದ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?

Date:

ಪುದೀನಾ ಎಲೆಗಳಿಂದ ಪಡೆಯಬಹುದಾದ ಆರೋಗ್ಯಕರ ಪ್ರಯೋಜನಗಳೇನು ಗೊತ್ತಾ..?

ಮನೆ ಮದ್ದಿನಲ್ಲಿ ಪುದೀನ ಎಲೆಯನ್ನು ವಿಶೇಷವಾಗಿ ಬಳಸಲಾಗುವುದು. ಇದರಲ್ಲಿ ಇರುವ ಔಷಧೀಯ ಗುಣಗಳು ಸಾಕಷ್ಟು ಅನಾರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತವೆ. ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ ಕಾಂಪ್ಲೆಕ್ಸ್ ಅನ್ನು ಹೊಂದಿರುವುದು. . ಪುದೀನ ಬಳಸುವುದರ ಮೂಲಕ ಯಾವೆಲ್ಲಾ ಆರೋಗ್ಯ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಡಬಹುದು? ಇಲ್ಲಿದೆ ಮಾಹಿತಿ
ಪುದೀನಾ ಎಲೆಗಳನ್ನು ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳು:
• ಪ್ರತಿದಿನ ಕನಿಷ್ಠ 5- 6 ಪುದೀನಾ ಎಲೆಗಳನ್ನು ಜಗಿದು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು.
• ಈ ಎಲೆಯ ರಸ ಅಥವಾ ಇದನ್ನು ಸೇರಿಸಿ ಮಾಡಿದ ಆಹಾರಗಳ ನಿಯಮಿತ ಸೇವನೆಯು ಎದೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಪುದೀನಾದಲ್ಲಿರುವ ಮೆಂಥೋಲ್ ಡಿಕಾಂಗಸ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಶ್ವಾಸಕೋಶದಲ್ಲಿ ಸಂಗ್ರಹವಾದ ಲೋಳೆಯನ್ನು ಹೊರಹಾಕುತ್ತದೆ. ಇದರಿಂದ ಸುಲಭವಾಗಿ ಉಸಿರಾಡಬಹದು.
• ಪುದೀನಾದ ಔಷಧೀಯ ಗುಣಗಳು ಮತ್ತು ಅದರ ಸುವಾಸನೆ ಅರೋಮಾಥೆರಪಿಗೆ ಸಹಾಯ ಮಾಡುತ್ತದೆ. ಅದರಲ್ಲಿರುವ ಉಲ್ಲಾಸದಾಯಕ ಪರಿಮಳ ನಿಮಗೆ ಬೇಗನೆ ಶಾಂತ ಮತ್ತು ಉಲ್ಲಾಸದ ಭಾವನೆಯನ್ನು ನೀಡುತ್ತದೆ. ಪುದೀನಾ ರಸದ ಸುವಾಸನೆ ಮಾನಸಿಕ ಒತ್ತಡ, ಖಿನ್ನತೆಯನ್ನು ತ್ವರಿತವಾಗಿ ನಿವಾರಿಸುತ್ತದೆ.
• ಪುದೀನಾ ಎಲೆಗಳನ್ನು ಜಗಿದು ತಿನ್ನುವುದರಿಂದ ಬಾಯಿಯ ನೈರ್ಮಲ್ಯ ಮತ್ತು ಹಲ್ಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿದಿನ ನಾಲ್ಕರಿಂದ ಐದು ಪುದೀನಾ ಎಲೆಗಳನ್ನು ಜಗಿಯುವುದರಿಂದ ಹಲ್ಲುನೋವು, ದವಡೆ ರಕ್ತಸ್ರಾವವನ್ನು ತಡೆಯಬಹುದು. ಜೊತೆಗೆ ಇದು ಒಸಡುಗಳನ್ನು ಬಲಪಡಿಸುತ್ತದೆ ಮತ್ತು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ.
• ಪುದೀನಾ ಎಲೆಗಳನ್ನು ವಿವಿಧ ರೀತಿಯಲ್ಲಿ ಬಳಸುವುದರಿಂದ ಚರ್ಮದ ಕಾಯಿಲೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಇದು ದೇಹದ ಉಷ್ಣತೆಯನ್ನು ಕಡಿಮೆ ಮಾಡುತ್ತದೆ.
• ಪುದೀನಾ ಎಲೆಗಳ ರಸವನ್ನು ಜೇನುತುಪ್ಪ ಅಥವಾ ಕೆಂಪು ಕಲ್ಲು ಸಕ್ಕರೆ ಮತ್ತು ನಿಂಬೆ ರಸದೊಂದಿಗೆ ಬೆರೆಸಿ ಸೇವಿಸುವುದರಿಂದ ಆಯಾಸ, ಆಲಸ್ಯ ಮತ್ತು ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಅಲ್ಲದೆ ಮನಸ್ಸನ್ನು ಉಲ್ಲಾಸಗೊಳಿಸುತ್ತದೆ.
• ಜಜ್ಜಿದ ಪುದೀನಾ ಎಲೆಗಳು ತಲೆನೋವು ಮತ್ತು ತಲೆ ತಿರುಗುವಿಕೆಯನ್ನು ನಿವಾರಿಸುತ್ತದೆ. ಜೇನುತುಪ್ಪದೊಂದಿಗೆ ಪುದೀನಾ ಕಷಾಯವನ್ನು ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

Share post:

Subscribe

spot_imgspot_img

Popular

More like this
Related

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್

ಅಕ್ರಮ ಆಸ್ತಿ ಕೇಸ್: ಶೃಂಗೇರಿ ಶಾಸಕ ರಾಜೇಗೌಡ್ರಿಗೆ ಲೋಕಾಯುಕ್ತ ಶಾಕ್ ಚಿಕ್ಕಮಗಳೂರು: ಶೃಂಗೇರಿ...

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ !

ನವರಾತ್ರಿ ಒಂಬತ್ತನೇ ದಿನದ ಪೂಜೆ – ಸಿದ್ಧಿದಾತ್ರಿಯ ಆರಾಧನೆ ! ಒಂಬತ್ತನೇ ದಿನ...

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ!

ಹಿರಿಯ ನಟ, ನಿರ್ದೇಶಕ,ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ನಿಧನ! ಹೃದಯಾಘಾತದಿಂದ ಹಿರಿಯ ರಂಗಭೂಮಿ...

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ ಅಬ್ಬರ

ಕರ್ನಾಟಕದಲ್ಲಿ 6 ದಿನಗಳ ಭಾರೀ ಮಳೆಯ ಮುನ್ಸೂಚನೆ: ಕರಾವಳಿಯಲ್ಲಿ ಗಾಳಿ, ಮಳೆ...