ಪುನೀತ್ ಅಭಿಮಾನಿಗಳಿಗೆ ಸಾ.ರಾ. ಗೋವಿಂದು ಸಿಹಿಸುದ್ದಿ

Date:

ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಚಿತ್ರರಂಗದಿಂದ ‘ಪುನೀತ್ ನಮನ’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆದರೆ ಈ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಅವಕಾಶವಿಲ್ಲ.

ಇದರಿಂದಾಗಿ ಪುನೀತ್ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೀಗ ಅಭಿಮಾನಿಗಳಿಗಾಗಿ ಹೊಸ ಸುದ್ದಿಯೊಂದು ಹೊರಬಿದ್ದಿದೆ.

 

ಇಂದಿನ ಪುನೀತ್ ನಮನ ಕಾರ್ಯಕ್ರಮದಲ್ಲಿ ಚಿತ್ರರಂಗದವರನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅವಕಾಶವಿಲ್ಲ. ಹಾಗಾಗಿ ಬೇರೊಂದು ದಿನ ಅಭಿಮಾನಿಗಳಿಗಾಗಿಯೇ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ನಿರ್ಮಾಪಕ ಸಾ.ರಾ.ಗೋವಿಂದು ತಿಳಿಸಿದ್ದಾರೆ.

ಪುನೀತ್ ಅಭಿಮಾನಿಗಳಿಗಾಗಿಯೇ ಬೇರೊಂದು ಕಾರ್ಯಕ್ರಮವನ್ನು ಬೆಂಗಳೂರು, ಹುಬ್ಬಳ್ಳಿ ಅಥವಾ ದಾವಣಗೆರೆಯಲ್ಲಿ ನಡೆಸಲು ಚಿಂತನೆ ನಡೆದಿದೆ. ಈ ಬಗ್ಗೆ ರಾಜ್ ಕುಟುಂಬ ಹಾಗೂ ಚಿತ್ರರಂಗದೊಂದಿಗೆ ಚರ್ಚಿಸಿ ಯಾವಾಗ ಕಾರ್ಯಕ್ರಮ ನಡೆಸಬೇಕು ಎಂಬ ಬಗ್ಗೆ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...